ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am