ಬ್ರೇಕಿಂಗ್ ನ್ಯೂಸ್
26-10-24 10:54 pm Mangalore Correspondent ಕರಾವಳಿ
ಉಳ್ಳಾಲ, ಅ.26: ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಬೀಡಾಡಿ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಲ್ಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಪಿಲಾರು ಪಲ್ಲದಲ್ಲಿರುವ ಸರಕಾರಿ ತೆರೆದ ಬಾವಿಯು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದಿದೆ. ಶನಿವಾರ ಸಂಜೆ ಬಾವಿಯ ಬಳಿಯಲ್ಲಿ ಬೀಡಾಡಿ ಹೋರಿಗಳೆರಡು ಗುದ್ದಾಡಿಕೊಂಡಿದ್ದು ಪರಿಣಾಮ ಒಂದು ಹೋರಿ ಬಾವಿಯೊಳಗೆ ಬಿದ್ದಿದೆ.




ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ಅವರು ಬಾವಿಯ ನೀರಲ್ಲಿ ಬಿದ್ದು ಹೋರಿ ಒದ್ದಾಡುತ್ತಿದ್ದುದನ್ನ ಕಂಡು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ತೆರೆದ ಪಾಳುಬಿದ್ದ ಬಾವಿಯನ್ನ ನಿರ್ಲಕ್ಷಿಸಿ ಜೀವ ಬಲಿಗಾಗಿ ಕಾಯುತ್ತಿರುವ ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಾವಿಯನ್ನ ಕಡೆಗಣಿಸಿರುವ ಪುರಸಭೆ ಅಧಿಕಾರಿಗಳು
ಪಿಲಾರು ಪಲ್ಲದಲ್ಲಿನ ಪ್ರಾಚೀನ ಬಾವಿಯಲ್ಲಿ ಯಥೇಚ್ಛ ನೀರಿದ್ದರೂ ಸೋಮೇಶ್ವರ ಪುರಸಭಾ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಈ ಬಾವಿ ಕಳೆದ ಅನೇಕ ವರ್ಷಗಳಿಂದ ಪಾಳು ಬಿದ್ದು ಗಿಡ ಗಂಟಿಗಳಿಂದ ಆವೃತವಾಗಿದೆ. ಕಳೆದ ತಿಂಗಳಲ್ಲಿ ನಡೆದಿದ್ದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ಮನೋಜ್ ಕಟ್ಟೆಮನೆ ಅವರು ಪಲ್ಲದ ಬಾವಿಯ ಅಭಿವೃದ್ಧಿ ಕಾಮಗಾರಿಯನ್ನ ಶೀಘ್ರವೇ ನಡೆಸುವಂತೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿಯವರಲ್ಲಿ ಆಗ್ರಹಿಸಿದ್ದರು. ಅಧಿಕಾರಿಗಳು ಇನ್ನೂ ಅಭಿವೃದ್ಧಿ ಕಾರ್ಯವನ್ನು ಮಾಡದೆ, ತೆರೆದ ಬಾವಿಗೊಂದು ರಕ್ಷಣೆಗಾಗಿ ಕನಿಷ್ಟ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ.
Mangalore Pillar cow falls into well, residents slam officials over negligence. Later cow was rescued by the public with the help of fire service personals.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm