ಬ್ರೇಕಿಂಗ್ ನ್ಯೂಸ್
27-10-24 10:37 pm Udupi Correspondent ಕರಾವಳಿ
ಉಡುಪಿ, ಅ.27: ಜಾತಿ ಗಣತಿ ವಿಚಾರದಲ್ಲಿ ಪುಡಿ ರಾಜಕಾರಣಿಯಾಗಿ ಮಾತಾಡ್ತಿದ್ದಾರೆ, ಕಾವಿ ಬಟ್ಟೆ ತೊಟ್ಟಿದನ್ನು ಕಳಚಲಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಅವರಿಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಿದ್ದಾಗ ಈ ಮಾತು ಉಲ್ಲೇಖಿಸಿದ ಸ್ವಾಮೀಜಿ, ಜಾತ್ಯತೀತ ರಾಷ್ಟ್ರದಲ್ಲಿ ಜಾತಿ ಲೆಕ್ಕ ಯಾಕೆ ಬೇಕಾಗುತ್ತದೆ. ಒಂದೆಡೆ ಜಾತ್ಯತೀತರು ಎಂದು ಹೇಳುವುದು, ಇನ್ನೊಂದೆಡೆ ಅದನ್ನೇ ಎಲ್ಲ ವಲಯದಲ್ಲೂ ಪೋಷಿಸುತ್ತಿದ್ದಾರೆ. ಇದರ ಬಗ್ಗೆ ಲೋಕದ ವ್ಯವಸ್ಥೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಜಾತ್ಯತೀತ ವ್ಯವಸ್ಥೆಯಲ್ಲಿ ಜಾತಿ ಲೆಕ್ಕ ಯಾಕೆಂದು ಕೇಳಿದ್ದೇನೆ. ಇದರ ಹಿಂದಿನ ಲೆಕ್ಕ ಅರ್ಥವಾಗಿಲ್ಲ ಎಂದೂ ಹೇಳಿದ್ದೆ. ಹೀಗೆ ಹೇಳಿರುವುದು ತಪ್ಪಂತೆ, ಪುಡಿ ರಾಜಕಾರಣ ಮಾಡುತ್ತಿದ್ದೇನೆ ಎನ್ನುತ್ತಿದ್ದಾರೆ.
ಹಾಗಾದರೆ, ಯಾವುದೇ ವಿಷಯದ ಬಗ್ಗೆ ಮಾತನಾಡಲು ರಾಜಕಾರಣಿಯೇ ಆಗಬೇಕೇ.. ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ, ಅಲ್ಲವೋ ಹೇಳಿ. ಹೌದು ಎಂದಾದರೆ ದೇಶದ ಸಾಮಾನ್ಯ ಪ್ರಜೆಗೂ ತನ್ನ ಅಭಿಪ್ರಾಯ ಹೇಳುವ ಹಕ್ಕು ಇದೆ. ಕಾವಿ ತೆಗೆದಿಟ್ಟು ರಾಜಕಾರಣಕ್ಕೆ ಬರಲಿ, ಉತ್ತರ ಕೊಡುತ್ತೇನೆ ಎಂದರೆ, ಏನರ್ಥ. ಸಮಾಜದಲ್ಲಿ ರಾಜಕಾರಣಿಗಳಿಗೆ ಮಾತ್ರ ಮಾತನಾಡುವ ಹಕ್ಕು ಇರುವುದು. ಪ್ರಜೆಗಳಿಗೆ ಮಾತನಾಡಲು ಅವಕಾಶ ಇಲ್ಲವೆಂದು ಹೇಳಿಬಿಡಲಿ. ಪೀಠಾಧಿಪತಿಗೆ ಅಲ್ಲ, ಸಾಮಾನ್ಯ ನಾಗರಿಕನಿಗೂ ಮಾತನಾಡುವ ಹಕ್ಕು ಇದೆ. ದೇವರೇ ಅವರಿಗೂ ಸದ್ಬುದ್ಧಿ ಕೊಡಲಿ ಎಂದು ಹೇಳುತ್ತೇನೆ ಎಂಬುದಾಗಿ ವಿಶ್ವಪ್ರಸನ್ನ ತೀರ್ಥ ಹೇಳಿದ್ದಾರೆ.
ವಾರದ ಹಿಂದೆ ಜಾತಿ ಗಣತಿ ವಿಚಾರದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಸ್ವಾಮೀಜಿ ಜಾತಿ ಗಣತಿ ಯಾಕೆ ಬೇಕೆಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಮುಖಂಡ ಹರಿಪ್ರಸಾದ್, ಸ್ವಾಮೀಜಿ ತಮ್ಮ ಮಠದಲ್ಲೇ ಪಂಕ್ತಿ ಭೇದ ಮಾಡುವುದು, ಮಡೆಸ್ನಾನ ಮಾಡಿಸುವ ವಿಚಾರವನ್ನು ನೋಡಿಕೊಳ್ಳಲಿ. ಆಬಳಿಕ ಜಾತಿ ಗಣತಿ ಬಗ್ಗೆ ಹೇಳಲಿ. ಬಹಳಷ್ಟು ನಂಬಿಕೆ ಇಟ್ಟಿರುವ ಸ್ವಾಮೀಜಿ ಸ್ಥಾನದಲ್ಲಿರುವ ವ್ಯಕ್ತಿ ಪುಡಿ ರಾಜಕಾರಣಿ ರೀತಿ ಮಾತನಾಡಬಾರದು ಎಂದು ಕಿಡಿಕಾರಿದ್ದರು.
Expressing his dismay over recent comments made by a political leader regarding his views on the caste census, Sri Vishwaprasanna Teertha Swamiji of Pejawar Mutt questioned whether it is wrong to express one’s opinion in a democracy.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm