ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm