ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm