ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am