ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm