ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm