ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm