ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am