ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm