ಬ್ರೇಕಿಂಗ್ ನ್ಯೂಸ್
12-12-20 03:23 pm Udupi Correspondent ಕರಾವಳಿ
ಉಡುಪಿ, ಡಿ.12 : ಸಂತೆಕಟ್ಟೆಯ ಆಶೀವಾರ್ದ್ ಥಿಯೇಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇರುವ ಸಾಫ್ಟ್ವೇರ್ ಕಂಪೆನಿ ‘ರೋಬೋ ಸಾಫ್ಟ್’ನಲ್ಲಿ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ರೋಬೋ ಸಾಫ್ಟ್ನ ಮೊದಲ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಉಡುಪಿಯ ಅಗ್ನಿ ಶಾಮಕದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ 15 ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿ, ರಾತ್ರಿ 2 ಗಂಟೆಗೆ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಕಟ್ಟಡ ಇಡೀ ಹೊಗೆಯಿಂದ ತುಂಬಿಕೊಂಡಿರುವುದು ಕಂಡುಬಂತು. ಕೊರೋನ ಬಳಿಕ ಇಲ್ಲಿನ ಸಿಬ್ಬಂದಿಗಳು ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಾರೆ. ಹಾಗಾಗಿ ರಾತ್ರಿ ಪಾಳಿಯಲ್ಲಿ ಯಾರು ಕೂಡ ಕೆಲಸ ನಿರ್ವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅವಘಡದಿಂದ ರೋಬೋ ಸಾಫ್ಟ್ ಒಳಗೆ ಇದ್ದ ಅನೇಕ ಕಂಪ್ಯೂಟರ್ ಹಾಗೂ ಇಂಟಿರಿಯರ್ ಮತ್ತು ಸರ್ವರ್ ರೂಮ್ಗೆ ಹಾನಿಯಾಗಿವೆ. ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ತಿಪ್ಪೆಸ್ವಾಮಿ ಮಾಹಿತಿ ನೀಡಿದರು.
In a fire mishap that occurred in Robosoft Technologies at Santhekatte Udupi, goods worth Rs 60 lac including computers, furniture and interiors were gutted.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am