ಬ್ರೇಕಿಂಗ್ ನ್ಯೂಸ್
05-11-24 10:05 pm Mangaluru Correspondent ಕರಾವಳಿ
ಮಂಗಳೂರು, ನ.5: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.
ಎಡನೀರು ಮಠದ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ದುಷ್ಕರ್ಮಿಗಳು ದಾಳಿ ನಡೆಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸಂಸದರು, ಹಿಂದೂ ಸಮಾಜದ ಮಾರ್ಗದರ್ಶಕರು ಹಾಗೂ ಆಧ್ಯಾತ್ಮಿಕ ಗುರುಗಳಾದ ಎಡನೀರು ಶ್ರೀಗಳ ಮೇಲೆ ಹಲ್ಲೆ ನಡೆಸಿರುವ ಘಟನೆಯು ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಕಾನೂನಿನ ಭಯವಿಲ್ಲದೆ ನಡುರಸ್ತೆಯಲ್ಲಿಯೇ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸ್ವಾಮೀಜಿ ಕಾರನ್ನು ತಡೆದು ನಿಲ್ಲಿಸಿ ರೌಡಿಸಂ ತೋರಿಸಿ ಸಮಾಜದಲ್ಲಿ ಭೀತಿ ಸೃಷ್ಟಿಸುವ ಇಂತಹ ಪುಂಡರನ್ನು ತಕ್ಷಣ ಮಟ್ಟಹಾಕಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

"ಕಾಸರಗೋಡಿನ ಗಡಿಯನ್ನು ಹಂಚಿಕೊಳ್ಳುವ ಮಂಗಳೂರಿನ (ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ) ಸಂಸದನಾಗಿ ಮತ್ತು ಸ್ವಾಮೀಜಿಯವರ ಮೇಲೆ ಅತೀವ ಗೌರವ ಹೊಂದಿರುವ ವ್ಯಕ್ತಿಯಾಗಿ, ಈ ಕೃತ್ಯದಲ್ಲಿ ಶಾಮೀಲಾದವರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಿಎಂ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸಿದ್ದಾರೆ.
ಸ್ವಾಮೀಜಿಗೆ ಹೀಗಾದರೆ ಸಾಮಾನ್ಯ ಹಿಂದುಗಳ ಪಾಡೇನು?
ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಈ ರೀತಿಯ ಕೃತ್ಯಗಳನ್ನು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅತ್ಯಗತ್ಯ. ಪೂಜ್ಯರಾದ ಸ್ವಾಮೀಜಿಯವರಿಗೆ ಸುರಕ್ಷತೆ ಇಲ್ಲ ಅಂದ ಮೇಲೆ, ಸಾಮಾನ್ಯ ಹಿಂದುವಿನ ಸ್ಥಿತಿ ಏನಾಗಬಹುದು? ಹೀಗಾಗಿ ಈ ಘಟನೆಯನ್ನು ಕೇರಳ ಸರ್ಕಾರ ಗಂಭೀರವಾಗಿ ಪರಿಗಣಿಸಿ ದಾಳಿ ನಡೆಸಿದ ದುಷ್ಕರ್ಮಿಗಳು ಮತ್ತು ಅವರ ಹಿಂದಿರುವ ದುಷ್ಟ ಶಕ್ತಿಗಳ ಬಗ್ಗೆಯೂ ತನಿಖೆಯಾಗಬೇಕು. ಈ ಕೃತ್ಯದಿಂದ ಧಾರ್ಮಿಕ ಸಹಿಷ್ಣುತೆ ಮತ್ತು ಸಾಮರಸ್ಯದ ಭಾವನೆಗಳಿಗೆ ಧಕ್ಕೆಯಾಗಿರುವುದು ಮಾತ್ರವಲ್ಲದೇ ಸಮಾಜದ ಶಾಂತಿ-ಸಹಬಾಳ್ವೆ ಕದಡಲು ಯತ್ನಿಸುವ ಸಮಾಜಘಾತುಕರಿಗೂ ಇದು ಪಾಠವಾಗಬೇಕು ಎಂಬ ಕಾರಣದಿಂದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಪತ್ರ ಬರೆದಿರುವುದಾಗಿ ಕ್ಯಾ. ಚೌಟ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
MP Brijesh Chowta urges Kerala CM for strict action against attack on Edneer Swamiji car. Miscreants have attacked Pujya Edneer Swamiji's car while he was travelling in it. Those guys followed the car & have hit the car Glass which has been damaged.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm