ಬ್ರೇಕಿಂಗ್ ನ್ಯೂಸ್
05-11-24 10:40 pm Mangaluru Correspondent ಕರಾವಳಿ
ಮಂಗಳೂರು, ನ.5: ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕಳೆದ ಐದಾರು ವರ್ಷಗಳಿಂದ ಡಾಮರೀಕರಣ, ನಿರ್ವಹಣೆ ಇಲ್ಲದೆ ಪೂರ್ತಿ ಹದಗೆಟ್ಟಿರುವ ಹೆದ್ದಾರಿಯ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡ ಹಲವರು ತಮ್ಮ ಅನಿಸಿಕೆ ಹೇಳಿಕೊಂಡರು. ಸಮಸ್ಯೆ ಬಗೆಹರಿಸಲು ಸ್ಥಳೀಯ ಜನಪ್ರತಿನಿಧಿಗಳ ನಿರಾಸಕ್ತಿಯ ಕುರಿತು ಆಕ್ಷೇಪಗಳು ವ್ಯಕ್ತವಾದವು. ಹೆದ್ದಾರಿಯ ದುಸ್ಥಿತಿಯಿಂದ ಅಪಘಾತಗಳು ಸರಣಿಯಾಗಿ ನಡೆಯುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು.
ಚರ್ಚೆ, ಅಭಿಪ್ರಾಯಗಳ ತರುವಾಯ ಹೆದ್ದಾರಿಯ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಪ್ರಧಾನವಾಗಿ, ಹದಗೆಟ್ಟಿರುವ ಸುರತ್ಕಲ್ - ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಪಡಿಸಬೇಕು, ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು, ಸರ್ವಿಸ್ ರಸ್ತೆಗಳನ್ನು ಹೆದ್ದಾರಿ ಉದ್ದಕ್ಕೂ ನಿರ್ಮಿಸಬೇಕು, ಬೀದಿ ದೀಪಗಳ ಅಳವಡಿಕೆ, ನಿರ್ವಹಣೆ ಸರಿಪಡಿಸಬೇಕು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಪ್ರಥಮ ಹಂತದಲ್ಲಿ ನವಂಬರ್ 26ರಂದು ಕೂಳೂರು ಸೇತುವೆ ಬಳಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಯಿತು.

ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಎಂ.ಜಿ. ಹೆಗ್ಡೆ ವಹಿಸಿದ್ದರು. ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ವಿಷಯ ಮಂಡಿಸಿದರು. ಶ್ರೀನಾಥ್ ಕುಲಾಲ್ ಸ್ವಾಗತಿಸಿದರು. ಮಾಜಿ ಉಪ ಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕರಾದ ಎಂ. ದೇವದಾಸ್, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಬಿ.ಕೆ ಇಮ್ತಿಯಾಜ್, ಮೂಸಬ್ಬ ಪಕ್ಷಿಕೆರೆ, ರಮೇಶ್ ಟಿ.ಎನ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಸುಧಾಕರ ಪಡುಬಿದ್ರೆ, ರಘು ಎಕ್ಕಾರು, ಕೃಷ್ಣ ತಣ್ಣೀರುಬಾವಿ, ಮುಸ್ಲಿಂ ಐಕ್ಯತಾ ವೇದಿಕೆಯ ಆಶ್ರಫ್ ಬದ್ರಿಯ, ಅದ್ದು ಕೃಷ್ಣಾಪುರ, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ, ಡಿವೈಎಫ್ಐ ನ ಮಕ್ಸೂದ್ ಬಿ ಕೆ, ಪ್ರಮೀಳಾ ಕೆ, ಮಹಿಳಾ ಕಾಂಗ್ರೆಸ್ ನ ಶಶಿಕಲಾ, ಹೋರಾಟ ಸಮಿತಿಯ ಪ್ರಮುಖರಾದ ಆನಂದ ಅಮೀನ್, ಹರೀಶ್ ಪೇಜಾವರ, ಅಬೂಬಕ್ಕರ್ ಬಾವ, ಆಶಾ ಬೋಳೂರು, ಗಂಗಾಧರ ಬಂಜನ್, ಶಮೀರ್ ಕಾಟಿಪಳ್ಳ, ಸಲೀಂ ಶ್ಯಾಡೋ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಹಾಜರಿದ್ದರು.
Mass Protest Planned on November 26th Against Poor Road Conditions on Mangalore Nanthoor Surathkal Highway
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am