ಬ್ರೇಕಿಂಗ್ ನ್ಯೂಸ್
05-11-24 10:40 pm Mangaluru Correspondent ಕರಾವಳಿ
ಮಂಗಳೂರು, ನ.5: ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕಳೆದ ಐದಾರು ವರ್ಷಗಳಿಂದ ಡಾಮರೀಕರಣ, ನಿರ್ವಹಣೆ ಇಲ್ಲದೆ ಪೂರ್ತಿ ಹದಗೆಟ್ಟಿರುವ ಹೆದ್ದಾರಿಯ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡ ಹಲವರು ತಮ್ಮ ಅನಿಸಿಕೆ ಹೇಳಿಕೊಂಡರು. ಸಮಸ್ಯೆ ಬಗೆಹರಿಸಲು ಸ್ಥಳೀಯ ಜನಪ್ರತಿನಿಧಿಗಳ ನಿರಾಸಕ್ತಿಯ ಕುರಿತು ಆಕ್ಷೇಪಗಳು ವ್ಯಕ್ತವಾದವು. ಹೆದ್ದಾರಿಯ ದುಸ್ಥಿತಿಯಿಂದ ಅಪಘಾತಗಳು ಸರಣಿಯಾಗಿ ನಡೆಯುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು.
ಚರ್ಚೆ, ಅಭಿಪ್ರಾಯಗಳ ತರುವಾಯ ಹೆದ್ದಾರಿಯ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಪ್ರಧಾನವಾಗಿ, ಹದಗೆಟ್ಟಿರುವ ಸುರತ್ಕಲ್ - ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಪಡಿಸಬೇಕು, ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು, ಸರ್ವಿಸ್ ರಸ್ತೆಗಳನ್ನು ಹೆದ್ದಾರಿ ಉದ್ದಕ್ಕೂ ನಿರ್ಮಿಸಬೇಕು, ಬೀದಿ ದೀಪಗಳ ಅಳವಡಿಕೆ, ನಿರ್ವಹಣೆ ಸರಿಪಡಿಸಬೇಕು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಪ್ರಥಮ ಹಂತದಲ್ಲಿ ನವಂಬರ್ 26ರಂದು ಕೂಳೂರು ಸೇತುವೆ ಬಳಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಯಿತು.
ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಎಂ.ಜಿ. ಹೆಗ್ಡೆ ವಹಿಸಿದ್ದರು. ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ವಿಷಯ ಮಂಡಿಸಿದರು. ಶ್ರೀನಾಥ್ ಕುಲಾಲ್ ಸ್ವಾಗತಿಸಿದರು. ಮಾಜಿ ಉಪ ಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕರಾದ ಎಂ. ದೇವದಾಸ್, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಬಿ.ಕೆ ಇಮ್ತಿಯಾಜ್, ಮೂಸಬ್ಬ ಪಕ್ಷಿಕೆರೆ, ರಮೇಶ್ ಟಿ.ಎನ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಸುಧಾಕರ ಪಡುಬಿದ್ರೆ, ರಘು ಎಕ್ಕಾರು, ಕೃಷ್ಣ ತಣ್ಣೀರುಬಾವಿ, ಮುಸ್ಲಿಂ ಐಕ್ಯತಾ ವೇದಿಕೆಯ ಆಶ್ರಫ್ ಬದ್ರಿಯ, ಅದ್ದು ಕೃಷ್ಣಾಪುರ, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ, ಡಿವೈಎಫ್ಐ ನ ಮಕ್ಸೂದ್ ಬಿ ಕೆ, ಪ್ರಮೀಳಾ ಕೆ, ಮಹಿಳಾ ಕಾಂಗ್ರೆಸ್ ನ ಶಶಿಕಲಾ, ಹೋರಾಟ ಸಮಿತಿಯ ಪ್ರಮುಖರಾದ ಆನಂದ ಅಮೀನ್, ಹರೀಶ್ ಪೇಜಾವರ, ಅಬೂಬಕ್ಕರ್ ಬಾವ, ಆಶಾ ಬೋಳೂರು, ಗಂಗಾಧರ ಬಂಜನ್, ಶಮೀರ್ ಕಾಟಿಪಳ್ಳ, ಸಲೀಂ ಶ್ಯಾಡೋ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಹಾಜರಿದ್ದರು.
Mass Protest Planned on November 26th Against Poor Road Conditions on Mangalore Nanthoor Surathkal Highway
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm