ಬ್ರೇಕಿಂಗ್ ನ್ಯೂಸ್
07-11-24 10:30 pm Mangalore Correspondent ಕರಾವಳಿ
ಮಂಗಳೂರು, ನ.7: ಅಡ್ಯಾರ್- ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಗುಂಡಿ ಬಿದ್ದು ಸಂಚಾರಕ್ಕೆ ತೀವ್ರ ತೊಡಕಾಗಿತ್ತು. ಪಡೀಲಿನಲ್ಲಿ ರಸ್ತೆ ಹೊಂಡ ಬಿದ್ದಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಸುದ್ದಿ ಬಿತ್ತರಿಸಿತ್ತು. ಅದರ ಬೆನ್ನಲ್ಲೇ ಹೊಂಡ ಮುಚ್ಚುವ ಕಾಮಗಾರಿ ನಡೆದಿತ್ತು. ವಾಹನ ಸವಾರರು ಹೆದ್ದಾರಿಗೊಂದು ಒಳ್ಳೆಯ ಟಾರು ಹಾಕಲಿ, ಇಲ್ಲಿ ಟಾರು ಕಾಣದೆ ಎಷ್ಟೋ ವರ್ಷ ಆಯ್ತು ಎಂದು ನಿರೀಕ್ಷೆ ಮಾಡಿದ್ದರು. ಇದೀಗ ಅಡ್ಯಾರು- ಪಡೀಲ್ ಹೆದ್ದಾರಿಯಲ್ಲಿ ಕಡೆಗೂ ಟಾರು ಹಾಕಿದ್ದು, ಫಳಫಳನೆ ಹೊಳೆಯುವ ಹೊಸ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ.




ಸುರತ್ಕಲ್ - ಬಿಸಿ ರೋಡ್ ಮಧ್ಯೆ 15 ವರ್ಷಗಳ ಹಿಂದೆ ಹೆದ್ದಾರಿ ನಿರ್ಮಾಣವಾಗಿತ್ತು. ಇರ್ಕಾನ್ ಸಂಸ್ಥೆಯವರು ಈ ರಸ್ತೆಯನ್ನು ನಿರ್ಮಿಸಿ ನಿರ್ವಹಣೆಗೆ ಎನ್ಎಂಪಿಟಿ ಬಂದರಿಗೆ ನೀಡಿದ್ದರು. ಕರಾವಳಿಯಲ್ಲಿ ಮೊದಲ ಬಾರಿಗೆ ಈ ರಸ್ತೆ ಚತುಷ್ಪಥಕ್ಕೆ ತೆರೆದುಕೊಂಡಿದ್ದರೂ, ಕಾಮಗಾರಿ ಸಮರ್ಪಕವಾಗದೆ ಹೆದ್ದಾರಿಯಲ್ಲಿ ಅಪಘಾತಗಳೇ ಹೆಚ್ಚಿದ್ದವು. ಮಂಗಳೂರು- ಬಿಸಿ ರೋಡ್ ಮಧ್ಯೆ ತಿರುವಿನ ರಸ್ತೆಗಳನ್ನು ನೇರವಾಗಿಸದೆ ಇದ್ದಂತೆಯೇ ತಿರುವು ಮುರುವು ರಸ್ತೆಗಳನ್ನು ನಿರ್ಮಿಸಲಾಗಿತ್ತು.





15 ವರ್ಷಗಳಲ್ಲಿ ಕೆಲವು ಬಾರಿ ಗುಂಡಿ ಬಿದ್ದ ಜಾಗಕ್ಕೆ ತೇಪೆ ಹಚ್ಚಿದ್ದು ಬಿಟ್ಟರೆ ಪೂರ್ತಿಯಾಗಿ ಡಾಮರು ಹಾಕಿದ್ದು ಇಲ್ಲ. ಈಗ ಪಡೀಲಿನಲ್ಲಿ ರಸ್ತೆಗೆ ಪೂರ್ತಿಯಾಗಿ ಡಾಮರು ಹಾಕಲಾಗುತ್ತಿದ್ದು ಕಪ್ಪಗಿನ ರಸ್ತೆ ಹೊಳೆಯುತ್ತಿದೆ. ಆದರೆ, ಆಧುನಿಕ ಮಾದರಿಯ ರಬ್ಬರ್ ಡಾಮರು ಹಾಕಿದರಷ್ಟೇ ಈಗ ಬಾಳಿಕೆ. ಅದಿಲ್ಲದಿದ್ದರೆ, ಮುಂದಿನ ವರ್ಷದ ಮಳೆಗಾಲಕ್ಕೆ ಡಾಮರು ಎದ್ದು ಹೋಗುತ್ತದೆ. ಕೇರಳದಲ್ಲಿ ಹೊಸತಾಗಿ ರಬ್ಬರ್ ಡಾಮರ್ ಹಾಕಿದರೂ, 5 ವರ್ಷ ಕಾಲ ಗ್ಯಾರಂಟಿ ಕೊಡಬೇಕು. ಅದರಲ್ಲಿ ಸಮಸ್ಯೆಯಾದರೆ, ಡಾಮರು ಹಾಕಿದವರೇ ಹೊಣೆ ಹೊರಬೇಕು. ಇಂಥ ಕಾನೂನು ಎಲ್ಲ ಕಡೆ ಇದ್ದರೂ ಅದನ್ನು ಮಂಗಳೂರಿನಲ್ಲಿ ಲಾಗಾಯ್ತಿ ಮಾಡ್ತಾ ಇಲ್ಲ. ಇದರಿಂದಾಗಿ ಹೆದ್ದಾರಿ ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ರಸ್ತೆ ಮಾಡೋದು, ತಿರುವು ಮುರುವಿನಲ್ಲಿ ಅಪಘಾತ ಆದರೂ ನಿರ್ಲಕ್ಷ್ಯ ಮಾಡೋದು, ಉತ್ತಮ ಗುಣಮಟ್ಟದ ಡಾಮರು ಹಾಕದಿರುವುದನ್ನು ಮಾಡುತ್ತ ಇದ್ದಾರೆ.
Mangalore Padil road filled with huge pot holes finally gets new tar after report by headline karnataka. Report was made expressing the pain of two wheelers who had to cross padil road.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am