ಬ್ರೇಕಿಂಗ್ ನ್ಯೂಸ್
09-11-24 06:52 pm Mangalore Correspondent ಕರಾವಳಿ
ಉಳ್ಳಾಲ, ನ.9: ಕೆಟ್ಟು ಕೆರ ಹಿಡಿದ ರಸ್ತೆ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದ್ದು, ಶವ ಸಾಗಿಸಲು ಒಪ್ಪದ 108 ಅಂಬ್ಯುಲೆನ್ಸ್ ಮತ್ತು ರಸ್ತೆ ದುರವಸ್ಥೆಯ ವಿರುದ್ಧ ರೊಚ್ಚಿಗೆದ್ದ ನಾಗರಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸುರತ್ಕಲ್ ಕುಳಾಯಿ ನಿವಾಸಿ ರೆಹಮತ್ (45) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ರೆಹಮತ್ ಅವರ ಪತಿ ರಶೀದ್ ಅವರು ಯೆನೆಪೋಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೆಂಟೆನೆನ್ಸ್ ಸಿಬ್ಬಂದಿಯಾಗಿದ್ದು ಶನಿವಾರ ಸಂಜೆ ವೇಳೆ ಆಕ್ಟಿವಾ ಸ್ಕೂಟರಲ್ಲಿ ಪತ್ನಿಯನ್ನ ಕುಳ್ಳಿರಿಸಿ ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆ ಬರುತ್ತಿದ್ದ ವೇಳೆ ಚೆಂಬುಗುಡ್ಡೆ ಎಂಬಲ್ಲಿ ಸ್ಕೂಟರ್ ಹದಗೆಟ್ಟ ರಸ್ತೆ ಗುಂಡಿಗೆ ಬಿದ್ದಿದೆ. ಪರಿಣಾಮ ಸ್ಕೂಟರ್ ಸಹ ಸವಾರೆ ರಶೀದ್ ಅವರ ಪತ್ನಿ ರೆಹಮತ್ ರಸ್ತೆಗೆಸೆಯಲ್ಪಟ್ಟಿದ್ದು ಆಕೆಯ ಮೇಲೆ ಹಿಂದಿನಿಂದ ಬರುತ್ತಿದ್ದ ಮೆಡಿಕಲ್ ಸರಕಿನ ಕಂಟೇನರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




ಮಹಿಳೆಯ ಶವ ಅರ್ಧ ಗಂಟೆಗೂ ಹೆಚ್ಚಿನ ಕಾಲ ರಸ್ತೆಯಲ್ಲೇ ಇದ್ದು, ಶವ ಸಾಗಿಸಲು ತಾಂತ್ರಿಕ ಕಾರಣ ನೀಡಿದ 108 ತುರ್ತು ಆಂಬುಲೆನ್ಸ್ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು-ಚೆಂಬುಗುಡ್ಡೆ ಸಂಪರ್ಕದ ಮಂಗಳೂರು ವಿವಿ ರಸ್ತೆಯು ಹೊಂಡ ಗುಂಡಿಗಳಿಂದ ಹದಗೆಟ್ಟಿದ್ದು ಇದನ್ನ ಸರಿಪಡಿಸದ ಲೋಕೋಪಯೋಗಿ ಅಧಿಕಾರಿಗಳು ಮತ್ತು ಇಂತಹ ಹದಗೆಟ್ಟ ರಸ್ತೆ ಮಧ್ಯದಲ್ಲೇ ನಿಂತು ಜನರಿಂದ ದಂಡ ಪೀಕಿಸುವ ಟ್ರಾಫಿಕ್ ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಮ ಫಾರೂಕಿ ,ಎಸಿಪಿ ಧನ್ಯನಾಯಕ್ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ದಿಢೀರ್ ಪ್ರತಿಭಟನೆಯಿಂದಾಗಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು ಕೊಣಾಜೆ, ಮುಡಿಪುವಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
Mangalore Thokottu accident, 45 year old woman dies on spot after tanker truck rams two wheeler after which the deceased woman was thrown in the air. public hold protest over roads filled with potholes
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm