ಬ್ರೇಕಿಂಗ್ ನ್ಯೂಸ್
09-11-24 06:52 pm Mangalore Correspondent ಕರಾವಳಿ
ಉಳ್ಳಾಲ, ನ.9: ಕೆಟ್ಟು ಕೆರ ಹಿಡಿದ ರಸ್ತೆ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದ್ದು, ಶವ ಸಾಗಿಸಲು ಒಪ್ಪದ 108 ಅಂಬ್ಯುಲೆನ್ಸ್ ಮತ್ತು ರಸ್ತೆ ದುರವಸ್ಥೆಯ ವಿರುದ್ಧ ರೊಚ್ಚಿಗೆದ್ದ ನಾಗರಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸುರತ್ಕಲ್ ಕುಳಾಯಿ ನಿವಾಸಿ ರೆಹಮತ್ (45) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ರೆಹಮತ್ ಅವರ ಪತಿ ರಶೀದ್ ಅವರು ಯೆನೆಪೋಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೆಂಟೆನೆನ್ಸ್ ಸಿಬ್ಬಂದಿಯಾಗಿದ್ದು ಶನಿವಾರ ಸಂಜೆ ವೇಳೆ ಆಕ್ಟಿವಾ ಸ್ಕೂಟರಲ್ಲಿ ಪತ್ನಿಯನ್ನ ಕುಳ್ಳಿರಿಸಿ ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆ ಬರುತ್ತಿದ್ದ ವೇಳೆ ಚೆಂಬುಗುಡ್ಡೆ ಎಂಬಲ್ಲಿ ಸ್ಕೂಟರ್ ಹದಗೆಟ್ಟ ರಸ್ತೆ ಗುಂಡಿಗೆ ಬಿದ್ದಿದೆ. ಪರಿಣಾಮ ಸ್ಕೂಟರ್ ಸಹ ಸವಾರೆ ರಶೀದ್ ಅವರ ಪತ್ನಿ ರೆಹಮತ್ ರಸ್ತೆಗೆಸೆಯಲ್ಪಟ್ಟಿದ್ದು ಆಕೆಯ ಮೇಲೆ ಹಿಂದಿನಿಂದ ಬರುತ್ತಿದ್ದ ಮೆಡಿಕಲ್ ಸರಕಿನ ಕಂಟೇನರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




ಮಹಿಳೆಯ ಶವ ಅರ್ಧ ಗಂಟೆಗೂ ಹೆಚ್ಚಿನ ಕಾಲ ರಸ್ತೆಯಲ್ಲೇ ಇದ್ದು, ಶವ ಸಾಗಿಸಲು ತಾಂತ್ರಿಕ ಕಾರಣ ನೀಡಿದ 108 ತುರ್ತು ಆಂಬುಲೆನ್ಸ್ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು-ಚೆಂಬುಗುಡ್ಡೆ ಸಂಪರ್ಕದ ಮಂಗಳೂರು ವಿವಿ ರಸ್ತೆಯು ಹೊಂಡ ಗುಂಡಿಗಳಿಂದ ಹದಗೆಟ್ಟಿದ್ದು ಇದನ್ನ ಸರಿಪಡಿಸದ ಲೋಕೋಪಯೋಗಿ ಅಧಿಕಾರಿಗಳು ಮತ್ತು ಇಂತಹ ಹದಗೆಟ್ಟ ರಸ್ತೆ ಮಧ್ಯದಲ್ಲೇ ನಿಂತು ಜನರಿಂದ ದಂಡ ಪೀಕಿಸುವ ಟ್ರಾಫಿಕ್ ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಮ ಫಾರೂಕಿ ,ಎಸಿಪಿ ಧನ್ಯನಾಯಕ್ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ದಿಢೀರ್ ಪ್ರತಿಭಟನೆಯಿಂದಾಗಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು ಕೊಣಾಜೆ, ಮುಡಿಪುವಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
Mangalore Thokottu accident, 45 year old woman dies on spot after tanker truck rams two wheeler after which the deceased woman was thrown in the air. public hold protest over roads filled with potholes
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm