ಬ್ರೇಕಿಂಗ್ ನ್ಯೂಸ್
09-11-24 06:52 pm Mangalore Correspondent ಕರಾವಳಿ
ಉಳ್ಳಾಲ, ನ.9: ಕೆಟ್ಟು ಕೆರ ಹಿಡಿದ ರಸ್ತೆ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದ್ದು, ಶವ ಸಾಗಿಸಲು ಒಪ್ಪದ 108 ಅಂಬ್ಯುಲೆನ್ಸ್ ಮತ್ತು ರಸ್ತೆ ದುರವಸ್ಥೆಯ ವಿರುದ್ಧ ರೊಚ್ಚಿಗೆದ್ದ ನಾಗರಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸುರತ್ಕಲ್ ಕುಳಾಯಿ ನಿವಾಸಿ ರೆಹಮತ್ (45) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ. ರೆಹಮತ್ ಅವರ ಪತಿ ರಶೀದ್ ಅವರು ಯೆನೆಪೋಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೆಂಟೆನೆನ್ಸ್ ಸಿಬ್ಬಂದಿಯಾಗಿದ್ದು ಶನಿವಾರ ಸಂಜೆ ವೇಳೆ ಆಕ್ಟಿವಾ ಸ್ಕೂಟರಲ್ಲಿ ಪತ್ನಿಯನ್ನ ಕುಳ್ಳಿರಿಸಿ ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆ ಬರುತ್ತಿದ್ದ ವೇಳೆ ಚೆಂಬುಗುಡ್ಡೆ ಎಂಬಲ್ಲಿ ಸ್ಕೂಟರ್ ಹದಗೆಟ್ಟ ರಸ್ತೆ ಗುಂಡಿಗೆ ಬಿದ್ದಿದೆ. ಪರಿಣಾಮ ಸ್ಕೂಟರ್ ಸಹ ಸವಾರೆ ರಶೀದ್ ಅವರ ಪತ್ನಿ ರೆಹಮತ್ ರಸ್ತೆಗೆಸೆಯಲ್ಪಟ್ಟಿದ್ದು ಆಕೆಯ ಮೇಲೆ ಹಿಂದಿನಿಂದ ಬರುತ್ತಿದ್ದ ಮೆಡಿಕಲ್ ಸರಕಿನ ಕಂಟೇನರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.




ಮಹಿಳೆಯ ಶವ ಅರ್ಧ ಗಂಟೆಗೂ ಹೆಚ್ಚಿನ ಕಾಲ ರಸ್ತೆಯಲ್ಲೇ ಇದ್ದು, ಶವ ಸಾಗಿಸಲು ತಾಂತ್ರಿಕ ಕಾರಣ ನೀಡಿದ 108 ತುರ್ತು ಆಂಬುಲೆನ್ಸ್ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು-ಚೆಂಬುಗುಡ್ಡೆ ಸಂಪರ್ಕದ ಮಂಗಳೂರು ವಿವಿ ರಸ್ತೆಯು ಹೊಂಡ ಗುಂಡಿಗಳಿಂದ ಹದಗೆಟ್ಟಿದ್ದು ಇದನ್ನ ಸರಿಪಡಿಸದ ಲೋಕೋಪಯೋಗಿ ಅಧಿಕಾರಿಗಳು ಮತ್ತು ಇಂತಹ ಹದಗೆಟ್ಟ ರಸ್ತೆ ಮಧ್ಯದಲ್ಲೇ ನಿಂತು ಜನರಿಂದ ದಂಡ ಪೀಕಿಸುವ ಟ್ರಾಫಿಕ್ ಪೊಲೀಸರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಮ ಫಾರೂಕಿ ,ಎಸಿಪಿ ಧನ್ಯನಾಯಕ್ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ದಿಢೀರ್ ಪ್ರತಿಭಟನೆಯಿಂದಾಗಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು ಕೊಣಾಜೆ, ಮುಡಿಪುವಿಗೆ ತೆರಳುವ ವಾಹನ ಸವಾರರು ಪರದಾಡುವಂತಾಗಿದೆ.
Mangalore Thokottu accident, 45 year old woman dies on spot after tanker truck rams two wheeler after which the deceased woman was thrown in the air. public hold protest over roads filled with potholes
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm