ಬ್ರೇಕಿಂಗ್ ನ್ಯೂಸ್
10-11-24 07:55 pm Mangalore Correspondent ಕರಾವಳಿ
ಮಂಗಳೂರು, ನ.10: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬ ಮಹಿಳೆ ಮೃತಪಟ್ಟಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿ ಪಾಲ್ಗೊಂಡಿರುವ ಕ್ಷೇತ್ರದ ಶಾಸಕ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತೀವ್ರ ನೋವು ವ್ಯಕ್ತಪಡಿಸಿ ಮೃತ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.
ಈಗಾಗಲೇ ಪ್ರಸ್ತುತ ರಸ್ತೆ ಅಭಿವೃದ್ಧಿಗಾಗಿ ಸಭಾಧ್ಯಕ್ಷ ಯು.ಟಿ ಖಾದರ್ ಅವರು ರಾಜ್ಯ ಸರಕಾರದಿಂದ ಮೂವತ್ತು ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದ್ದು ಮಳೆಯ ಕಾರಣದಿಂದಾಗಿ ಕಾಮಗಾರಿ ಪ್ರಾರಂಭಕ್ಕೆ ವಿಳಂಬವಾಗಿತ್ತು. ಪ್ರತಿ ಮಳೆಗಾಲದ ಬಳಿಕ ರಸ್ತೆಗಳ ಗುಂಡಿಗಳನ್ನು ಸರಿಪಡಿಸುವುದು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕರ್ತವ್ಯ. ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿಯನ್ನು ಆಧರಿಸಿ ಈ ಘಟನೆ ಸಂಭವಿಸುವುದಕ್ಕು ಮೊದಲೇ ರಸ್ತೆ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು ಟಿ ಖಾದರ್ ಸೂಚನೆ ನೀಡಿದ್ದರು.




ಇಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಂಡಿದ್ದು, ಅಪಘಾತದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಯು.ಟಿ ಖಾದರ್ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಪಘಾತ ಸಂದರ್ಭದಲ್ಲಿ ನೆರವಿಗೆ ಧಾವಿಸಿರುವ ಉಳ್ಳಾಲದ ಯುವಕರನ್ನು ಈ ಸಂದರ್ಭದಲ್ಲಿ ಯು.ಟಿ ಖಾದರ್ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
Mangalore Thokottu accident, speaker ut Khader orders for action against highway officlas over negligence after woman was rammed by tanker while she fell off the road due to pot holes.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am