ಬ್ರೇಕಿಂಗ್ ನ್ಯೂಸ್
10-11-24 11:13 pm Mangalore Correspondent ಕರಾವಳಿ
ಮಂಗಳೂರು, ನ.10: ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಕಾರಿಗೆ ತಾಗಿದೆಯೆಂದು ಯುವಕರ ತಂಡವೊಂದು ಬಸ್ಸನ್ನು ಅಡ್ಡಗಟ್ಟಿ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಯಾಣಿಕರ ಎದುರಲ್ಲಿ ಭೀತಿ ಸೃಷ್ಟಿಸಿದ ಘಟನೆ ವಾಮಂಜೂರಿನಲ್ಲಿ ನಡೆದಿದ್ದು ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು - ಮೂಡುಬಿದ್ರೆ ಸಂಚರಿಸುವ ಎಪಿಎಂ ಹೆಸರಿನ ಖಾಸಗಿ ಬಸ್ಸನ್ನು ವಾಮಂಜೂರಿನಲ್ಲಿ ಅಡ್ಡ ಹಾಕಿದ ಮುಸ್ಲಿಂ ಯುವಕರ ತಂಡವು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಚಾಲಕನನ್ನು ಬಸ್ಸಿನಿಂದ ಇಳಿಯುವಂತೆ ಜೋರು ಮಾಡುವ ವಿಡಿಯೋ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ. ಆನಂತರ ಬಸ್ ಸಿಬಂದಿ ಮತ್ತು ಯುವಕರ ನಡುವೆ ನಡುಬೀದಿಯಲ್ಲಿ ಹೊಯ್ ಕೈ ಆಗಿದೆ.



ಇದರ ಬೆನ್ನಲ್ಲೇ ಎರಡೂ ತಂಡಗಳ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಸ್ ನಿಲ್ಲಿಸಿ ಗೂಂಡಾಗಿರಿ ತೋರಿಸಿದ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಎರಡೂ ಕಡೆಯವರು ದೂರು ಕೊಡಲು ಒಪ್ಪದೆ ರಾಜಿಯಲ್ಲಿ ಪ್ರಕರಣ ಇತ್ಯರ್ಥ ಪಡಿಸಲು ಒಪ್ಪಿಕೊಂಡಿದ್ದಾರೆ.
ಹಲ್ಲೆಗೆ ಯತ್ನಿಸಿದ ರಫಿ ಅಫ್ರೀದ್, ಅಕ್ಬರ್, ಜಾಕಿರ್ ಹುಸೇನ್, ಸಾಹಿಲ್, ಮಯತಿ, ಬದ್ರುದ್ದೀನ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಮುಚ್ಚಳಿಕೆ ಬರೆಸಿ ಕಳಿಸಿದ್ದಾರೆ. ಅಲ್ಲದೆ, ಬಿಎನ್ಎಸ್ 119(4) ಅಡಿ ಕೇಸು ದಾಖಲಿಸಿದ್ದಾರೆ.
#Muslim Youths in #Mangalore attacked a bus driver over a disagreement regarding an overtaking maneuver at #Vamanjoor. Four individuals have been arrested by the Mangalore #Police in connection with the incident. #BreakingNews #Mangalore pic.twitter.com/e34wIsWb9Y
— Headline Karnataka (@hknewsonline) November 10, 2024
Mangalore Youths Assult bus driver over over take issue at vamanjoor, four have been arrested by the Mangalore rural police station. Youths have found even misbehaving with the passengers inside the bus. Video of this has gone viral on social media.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm