ಬ್ರೇಕಿಂಗ್ ನ್ಯೂಸ್
11-11-24 11:03 pm Udupi Correspondent ಕರಾವಳಿ
ಉಡುಪಿ, ನ.11: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ ಡಾ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋಹನ್ (45) ಎಂಬಾತನನ್ನು ಸ್ಥಳೀಯರು ಹಲ್ಲೆಗೈದು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆತನನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿದ್ದರು. ಆದರೆ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಲ್ಲ ಎನ್ನಲಾಗುತ್ತಿದೆ. ಆರೋಪಿ ಬಂಧನ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸಿಲ್ಲವೆಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಹೆಡ್ ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ.
ಲಾಕಪ್ ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸ್ ಅಧೀಕ್ಷಕರು ಹಾಗೂ ಅವರ ತಂಡ ಸೋಮವಾರ ಉಡುಪಿಗೆ ಆಗಮಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅದೇ ರೀತಿ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಶವಗಾರದಲ್ಲಿ ಮೃತದೇಹವನ್ನು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಬಿಜು ಮೋಹನ್ ಲಾಕಪ್ನಲ್ಲಿ ಮೃತಪಟ್ಟಿರುವ ಮಾಹಿತಿಯನ್ನು ಪೊಲೀಸರು ನ.10ರಂದು ಬೆಳಗ್ಗೆ ಕೊಲ್ಲಂನಲ್ಲಿರುವ ಆತನ ಕುಟುಂಬಸ್ಥರಿಗೆ ನೀಡಿದ್ದರು. ಅದರಂತೆ ಅಲ್ಲಿಂದ ಹೊರಟ ಕುಟುಂಬಸ್ಥರು ಬ್ರಹ್ಮಾವರ ತಲುಪಿ ಶವಾಗಾರಕ್ಕೆ ಆಗಮಿಸಿದ ಕುಟುಂಬಸ್ಥರು ಬಿಜು ಮೋನು ಅವರ ಮೃತ ದೇಹವನ್ನು ಪರಿಶೀಲಿಸಿದ್ದರು. ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದ ಮೃತ ಬಿಜು ಮೋಹನ್ ಅವರ ಚಿಕ್ಕಪ್ಪನ ಮಗ ಅನೀಶ್ ಡೆನಿಲ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Madhu B E, police sub-inspector of Brahmavar police station, and Sujatha, head constable, have been suspended following the lockup death incident that occurred at Brahmavar station in the early hours of November 10.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm