ಬ್ರೇಕಿಂಗ್ ನ್ಯೂಸ್
13-11-24 08:17 pm Mangaluru corespondent ಕರಾವಳಿ
ಮಂಗಳೂರು, ನ.13: ನಗರದ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಯುವ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ಆಶಾ ರೋಡ್ರಿಗಸ್ (23) ಅವರು ಕಾಲೇಜಿನ ಮೆಟ್ಟಿಲಿನಲ್ಲಿ ಅಕಸ್ಮಾತ್ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದವರು ಮೃತಪಟ್ಟಿದ್ದಾರೆ.
ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು. ನ.9ರಂದು ಕಾಲೇಜಿನಲ್ಲಿ ಮೆಟ್ಟಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಅಕಸ್ಮಾತ್ ಬಿದ್ದು ತಲೆಗೆ ಪೆಟ್ಟು ಆಗಿತ್ತೆನ್ನಲಾಗಿದೆ. ಕೂಡಲೇ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಕೋಮಾ ಸ್ಥಿತಿಯಲ್ಲಿದ್ದ ಗ್ಲೋರಿಯಾ ಅವರು ನ.13ರ ಬುಧವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಈ ನಡುವೆ, ಅ.11ರಂದು ಕಾಲೇಜು ಕ್ಯಾಂಪಸಿನ ಅಲೋಶಿಯಸ್ ಚಾಪೆಲ್ ನಲ್ಲಿ ಗ್ಲೋರಿಯಾ ಚೇತರಿಕೆ ಆಗಲೆಂದು ಹಾರೈಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿತ್ತು. ಅವರ ಅಂತ್ಯಕ್ರಿಯೆ ನ.14ರ ಮಧ್ಯಾಹ್ನ ಬಜ್ಪೆಯ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಡೆಯಲಿದೆ. ಗ್ಲೋರಿಯಾ ಅವರು ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿದ್ದರು.

ಅಲರ್ಜಿ ಕಾಯಿಲೆಯಿಂದ ಸಾವು; ಐವರಿಗೆ ಅಂಗಾಂಗ ದಾನ
ಮೃತಪಟ್ಟ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಳನ್ನು ಐವರಿಗೆ ದಾನ ಮಾಡಲಾಗಿದೆ ಎಂದು ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಗ್ಲೋರಿಯಾ ಅವರಿಗೆ anaphylactic reaction ಸಮಸ್ಯೆ ಉಂಟಾಗಿದ್ದು ಇದರ ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರ ತಂಡ ಮೆದುಳು ನಿಷ್ಕ್ರಿಯವಾಗಿರುವ ಬಗ್ಗೆ ನ.11ರಂದು ಸಂಜೆ ನಾಲ್ಕು ಗಂಟೆಗೆ ಘೋಷಣೆ ಮಾಡಿತ್ತು. ಆನಂತರ ಆಕೆಯ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದರು. ಅದರಂತೆ, ಎಜೆ ಆಸ್ಪತ್ರೆಗೆ ಲಿವರ್, ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ಶ್ವಾಸಕೋಶ, ನಾರಾಯಣ ಹೃದಯಾಲಯಕ್ಕೆ ಹಾರ್ಟ್, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕಿಡ್ನಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚರ್ಮ ಮತ್ತು ಕಣ್ಣಿನ ಕಾರ್ನಿಯಾವನ್ನು ಉಳಿಸಿಕೊಳ್ಳಲಾಗಿದೆ.
anaphylactic reaction ಎನ್ನುವುದು ಮಾರಣಾಂತಿಕ ಅಲರ್ಜಿ ಕಾಯಿಲೆಯಾಗಿದ್ದು ಇದರಿಂದ ಬಹು ಅಂಗಾಂಗ ವೈಫಲ್ಯ ಉಂಟಾಗುತ್ತದೆ. ಗ್ಲೋರಿಯಾ ಅವರಿಗೆ ಯಾವುದೋ ಆಹಾರ ಸೇವನೆ ಬಳಿಕ ಈ ರೀತಿಯ ಅಲರ್ಜಿ ಉಂಟಾಗಿತ್ತು ಎಂದು ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ಪ್ರಕಟಣೆ ತಿಳಿಸಿದೆ.
23-year-old Aloysius College assistant professor Gloria Rodrigues has died following a head injury sustained from a fall down the staircase. She had been receiving treatment at Fr. Muller's Hospital but breathed her last on November 13, 2024.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am