ಬ್ರೇಕಿಂಗ್ ನ್ಯೂಸ್
18-11-24 09:51 pm Mangalore Correspondent ಕರಾವಳಿ
ಉಳ್ಳಾಲ, ನ.18: ದೇವರು ನಮ್ಮ ಕಣ್ಣಿಗೆ ನೇರವಾಗಿ ಕಾಣಲ್ಲ. ಆದರೆ ನಮ್ಮ ಸಂಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುವವರೇ ನಮಗೆ ದೇವರ ಸ್ವರೂಪಿಗಳಾಗುತ್ತಾರೆ ಎಂದು ಮುಳುಗು ತಜ್ಞ, ಜೀವರಕ್ಷಕ ಈಶ್ವರ್ ಮಲ್ಪೆ ಅಭಿಪ್ರಾಯಪಟ್ಟರು.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಭಾನುವಾರ ತೊಕ್ಕೊಟ್ಟು, ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆದ 200 ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದಿರು ತಮ್ಮ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಮೊಬೈಲ್ ಕೊಡಬೇಡಿ. ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳಲ್ಲಿ ಹೊಸತನ ಬೆಳೆಸಲು ಈಜು ಕಲಿಸಿ. ಈಜು ಆತ್ಮ ರಕ್ಷಣೆಗೂ ಸಹಕಾರಿಯಾಗುವುದಲ್ಲದೆ ಮಕ್ಕಳ ದೈಹಿಕ, ಮಾನಸಿಕ ಕ್ಷಮತೆಗೆ ಅತ್ಯುತ್ತಮವಾದ ವ್ಯಾಯಾಮವಾಗಿದೆ ಎಂದರು.
ಸಮಾಜಕ್ಕೆ ನಾನು ಮಾಡಿದ ಸಣ್ಣ ಸೇವೆಯ ಪುಣ್ಯದ ಫಲವಾಗಿ ನನ್ನ ಮೂರು ವಿಶೇಷ ಚೇತನ ಮಕ್ಕಳಲ್ಲಿ ಇಬ್ಬರು ಗುಣಮುಖರಾಗಿದ್ದಾರೆ. ಕೇರಳದ ದಾನಿಗಳ ಸಹಕಾರದಿಂದ ಇಪ್ಪತ್ತಮೂರು ವರುಷದಿಂದ ಮಲಗಿದ್ದಲ್ಲೇ ಇದ್ದ ಮಗು ವೀಲ್ ಚೆಯರಲ್ಲಿ ಹೋಗುವಂತಾಗಿದೆ. ಏಳು ವರುಷಗಳಿಂದ ನಡೆದಾಡದ ಮತ್ತೊಬ್ಬಳು ಈಗ ನಡೆದಾಡುತ್ತಿದ್ದಾಳೆ ಎಂದು ಈಶ್ವರ್ ಮಲ್ಪೆ ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮಾರುತಿ ಯುವಕ ಮಂಡಲದ ಗೌರವಾಧ್ಯಕ್ಷ ವರದರಾಜ್ ಬಂಗೇರ ಮಾತನಾಡಿ, ಸಾಯಿ ಪರಿವಾರ್ ಟ್ರಸ್ಟ್ ಅತ್ಯಂತ ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಿದ ಸಂಸ್ಥೆಯಾಗಿದೆ. ಸಂಸ್ಥೆಗೆ ಆದಷ್ಟು ಶೀಘ್ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಲಿ ಎಂದು ಹಾರೈಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಬರ್ಕೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಯಜ್ಞೇಶ್ವರ್ ಶೆಟ್ಟಿ ಬರ್ಕೆ, ಅಸ್ತೃ ಗ್ರೂಪ್ ಸಿಇಒ ಲಾಂಚುಲಾಲ್ ಕೆ.ಎಸ್ ಮೂಕಾಂಬಿಕ ಕನ್ಸ್ಟ್ರಕ್ಷನ್ಸ್ ಮಾಲಕರಾದ ಚಂದ್ರಹಾಸ್ ಪಂಡಿತ್ ಹೌಸ್, ರಂಗಭೂಮಿ ಮತ್ತು ಚಲನಚಿತ್ರ ನಟ ಸ್ವರಾಜ್ ಶೆಟ್ಟಿ, ಅನ್ವಿತ್ ಇಲೆಕ್ಟ್ರಾನಿಕ್ಸ್ ಮಾಲಕರಾದ ಪ್ರಕಾಶ್, ಕದ್ರಿ ಈವೆಂಟ್ಸ್ ಜಗದೀಶ್ ಕದ್ರಿ ವಿಶೇಷ ಅತಿಥಿಗಳಾಗಿದ್ದರು.
Mangalore Eshwar maple encourages parents to send their children to swimming class after Drowning incident at resort.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm