ಬ್ರೇಕಿಂಗ್ ನ್ಯೂಸ್
19-11-24 07:29 pm Mangalore Correspondent ಕರಾವಳಿ
ಮಂಗಳೂರು, ನ.19 : ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದ ಭುವನೇಂದ್ರ ಪುದುವೆಟ್ಟು(44) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ಯಾಂಕ್ರಿಯಾಸಿಸ್ ಆಗಿರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರು ಕರಾವಳಿ ಅಲೆ ಮೂಲಕ ಪತ್ರಿಕಾ ವೃತ್ತಿ ಆರಂಭಿಸಿದ್ದರು. ಆನಂತರ, ವೆಬ್ದುನಿಯಾ, ಕಸ್ತೂರಿ ಚಾನೆಲ್, ಉಷಾಕಿರಣ, ವಿಜಯವಾಣಿ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.
ಒಂದು ವರ್ಷದ ಹಿಂದೆ ವಿಜಯವಾಣಿ ಪತ್ರಿಕೆ ಬಿಟ್ಟು ಊರಿನಲ್ಲಿ ಕೃಷಿ ಮಾಡುವ ಜೊತೆಗೆ ಸುದ್ದಿ ಪತ್ರಿಕೆಗೆ ವರದಿಗಾರನಾಗಿ ಕೆಲಸ ಮಾಡುತ್ತಿದ್ದರು. ಬೆಳ್ತಂಗಡಿಯಿಂದ ಸುದ್ದಿ ಬಿಡುಗಡೆ ಪತ್ರಿಕೆಗೆ ಮುಖ್ಯ ವರದಿಗಾರನಾಗಿದ್ದರು. 2024ರ ಸುದ್ದಿ ಬಿಡುಗಡೆ ದೀಪಾವಳಿ ವಿಶೇಷಾಂಕದ ನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
Mangalore Chief reporter of Suddi Bidugade paper Bhuvanendra Puduvettu passes away at 42. Bhuvanendra, the son of Narayana Poojary and Mohini, residents of Puduvettu in Dharmasthala village, was admitted to Alva’s Hospital, Moodbidri, two days ago due to severe abdominal pain and vomiting.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am