ಬ್ರೇಕಿಂಗ್ ನ್ಯೂಸ್
13-12-20 02:35 pm Mangaluru Correspondent ಕರಾವಳಿ
ಉಳ್ಳಾಲ, ಡಿ.13: ಕುಂಪಲದಲ್ಲಿ ನಡೆಯುತ್ತಿರುವ ತಂಬೂರಿ ತುಳು ಭಜನಾ ಸ್ಪರ್ಧೆಯ ಎರಡನೇ ಸುತ್ತಿನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ. ಭಜನಾ ಸ್ಪರ್ಧೆಯಲ್ಲಿ ಭಜಕರೊಂದಿಗೆ ಕುಳಿತ ನಳಿನ್ ಕುಮಾರ್, ಭಜನೆಗೆ ತಾಳ ಹಾಕಿ ಗಮನಸೆಳೆದರು.
ಕುಂಪಲ ಬಾಲಕೃಷ್ಣ ಮಂದಿರದ ನೆರಳಲ್ಲಿ ದ.ಕ. ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ತಂಬೂರಿ ತುಳು ಭಜನಾ ಸ್ಫರ್ಧೆಯ ಎರಡನೇ ಸುತ್ತನ್ನು ಅವರು ಉದ್ಘಾಟಿಸಿ ಮಾತನಾಡಿದರು. ತುಳು ಭಜನೆ ಕೇಳಲೆಂದೇ ರಾಯಚೂರಿನಿಂದ ಇಲ್ಲಿಯವರೆಗೆ ಬಂದಿದ್ದೇನೆ. ಬಾಲಕೃಷ್ಣ ಮಂದಿರದ ಪ್ರತಿಯೊಂದು ಕಾರ್ಯಕ್ರಮಗಳು ಇತಿಹಾಸ ಸೃಷಿಸಲು ಇಲ್ಲಿನ ಸಂಸ್ಕಾರ, ಬದ್ಧತೆ, ಶಿಸ್ತೇ ಕಾರಣವಾಗಿದೆ. ತಂಬೂರಿ ಎಂಬುದೇ ಭಜನೆಯತ್ತ ಆಕರ್ಷಿತವನ್ನಾಗಿಸುವ ಹೆಸರಾಗಿದೆ. ಭಜನೆಗೆ ಭಾವ, ಸಂಗೀತ, ಲಯಗಳ ಅಗತ್ಯವಿರುವುದಿಲ್ಲ. ಹೃದಯದೊಳಗಿನ ಭಕ್ತಿಯ ಭಾವನೆಗಳೇ ಹೊರಬಂದು ಭಜನೆಯಾಗಬೇಕೆಂದರು.


ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಭಜನಾ ಸ್ಫರ್ಧೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಜನಾ ಮಂಡಳಿ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾಪನೆ ಇದೆ. ತಕ್ಷಣ ಆ ಪ್ರಸ್ತಾಪಕ್ಕೆ ಸ್ವರೂಪ ಕೊಡುವ ಕಾರ್ಯಕ್ಕೆ ಮುಂದಾಗಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದರು.
ಕಳೆದ ವಾರ ನಡೆದ ಪುರುಷರ ಭಜನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡದವರಿಗೆ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಯಶಸ್ಸಿನ ಮುಖ್ಯ ರೂವಾರಿ ಪ್ರವೀಣ್ ಎಸ್. ಕುಂಪಲ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದಿಸಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, MEIL ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ವೀಣಾ ಮಂಗಳ, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ನಿಶಾಂತ್ ಮೊದಲಾದವರು ಇದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಕುಂಪಲ ನಿರೂಪಿಸಿದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm