ಬ್ರೇಕಿಂಗ್ ನ್ಯೂಸ್
13-12-20 02:35 pm Mangaluru Correspondent ಕರಾವಳಿ
ಉಳ್ಳಾಲ, ಡಿ.13: ಕುಂಪಲದಲ್ಲಿ ನಡೆಯುತ್ತಿರುವ ತಂಬೂರಿ ತುಳು ಭಜನಾ ಸ್ಪರ್ಧೆಯ ಎರಡನೇ ಸುತ್ತಿನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ. ಭಜನಾ ಸ್ಪರ್ಧೆಯಲ್ಲಿ ಭಜಕರೊಂದಿಗೆ ಕುಳಿತ ನಳಿನ್ ಕುಮಾರ್, ಭಜನೆಗೆ ತಾಳ ಹಾಕಿ ಗಮನಸೆಳೆದರು.
ಕುಂಪಲ ಬಾಲಕೃಷ್ಣ ಮಂದಿರದ ನೆರಳಲ್ಲಿ ದ.ಕ. ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ತಂಬೂರಿ ತುಳು ಭಜನಾ ಸ್ಫರ್ಧೆಯ ಎರಡನೇ ಸುತ್ತನ್ನು ಅವರು ಉದ್ಘಾಟಿಸಿ ಮಾತನಾಡಿದರು. ತುಳು ಭಜನೆ ಕೇಳಲೆಂದೇ ರಾಯಚೂರಿನಿಂದ ಇಲ್ಲಿಯವರೆಗೆ ಬಂದಿದ್ದೇನೆ. ಬಾಲಕೃಷ್ಣ ಮಂದಿರದ ಪ್ರತಿಯೊಂದು ಕಾರ್ಯಕ್ರಮಗಳು ಇತಿಹಾಸ ಸೃಷಿಸಲು ಇಲ್ಲಿನ ಸಂಸ್ಕಾರ, ಬದ್ಧತೆ, ಶಿಸ್ತೇ ಕಾರಣವಾಗಿದೆ. ತಂಬೂರಿ ಎಂಬುದೇ ಭಜನೆಯತ್ತ ಆಕರ್ಷಿತವನ್ನಾಗಿಸುವ ಹೆಸರಾಗಿದೆ. ಭಜನೆಗೆ ಭಾವ, ಸಂಗೀತ, ಲಯಗಳ ಅಗತ್ಯವಿರುವುದಿಲ್ಲ. ಹೃದಯದೊಳಗಿನ ಭಕ್ತಿಯ ಭಾವನೆಗಳೇ ಹೊರಬಂದು ಭಜನೆಯಾಗಬೇಕೆಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಭಜನಾ ಸ್ಫರ್ಧೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಜನಾ ಮಂಡಳಿ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾಪನೆ ಇದೆ. ತಕ್ಷಣ ಆ ಪ್ರಸ್ತಾಪಕ್ಕೆ ಸ್ವರೂಪ ಕೊಡುವ ಕಾರ್ಯಕ್ಕೆ ಮುಂದಾಗಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದರು.
ಕಳೆದ ವಾರ ನಡೆದ ಪುರುಷರ ಭಜನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡದವರಿಗೆ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಯಶಸ್ಸಿನ ಮುಖ್ಯ ರೂವಾರಿ ಪ್ರವೀಣ್ ಎಸ್. ಕುಂಪಲ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದಿಸಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, MEIL ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ವೀಣಾ ಮಂಗಳ, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ನಿಶಾಂತ್ ಮೊದಲಾದವರು ಇದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಕುಂಪಲ ನಿರೂಪಿಸಿದರು.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm