ಬ್ರೇಕಿಂಗ್ ನ್ಯೂಸ್
13-12-20 02:35 pm Mangaluru Correspondent ಕರಾವಳಿ
ಉಳ್ಳಾಲ, ಡಿ.13: ಕುಂಪಲದಲ್ಲಿ ನಡೆಯುತ್ತಿರುವ ತಂಬೂರಿ ತುಳು ಭಜನಾ ಸ್ಪರ್ಧೆಯ ಎರಡನೇ ಸುತ್ತಿನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ. ಭಜನಾ ಸ್ಪರ್ಧೆಯಲ್ಲಿ ಭಜಕರೊಂದಿಗೆ ಕುಳಿತ ನಳಿನ್ ಕುಮಾರ್, ಭಜನೆಗೆ ತಾಳ ಹಾಕಿ ಗಮನಸೆಳೆದರು.
ಕುಂಪಲ ಬಾಲಕೃಷ್ಣ ಮಂದಿರದ ನೆರಳಲ್ಲಿ ದ.ಕ. ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ತಂಬೂರಿ ತುಳು ಭಜನಾ ಸ್ಫರ್ಧೆಯ ಎರಡನೇ ಸುತ್ತನ್ನು ಅವರು ಉದ್ಘಾಟಿಸಿ ಮಾತನಾಡಿದರು. ತುಳು ಭಜನೆ ಕೇಳಲೆಂದೇ ರಾಯಚೂರಿನಿಂದ ಇಲ್ಲಿಯವರೆಗೆ ಬಂದಿದ್ದೇನೆ. ಬಾಲಕೃಷ್ಣ ಮಂದಿರದ ಪ್ರತಿಯೊಂದು ಕಾರ್ಯಕ್ರಮಗಳು ಇತಿಹಾಸ ಸೃಷಿಸಲು ಇಲ್ಲಿನ ಸಂಸ್ಕಾರ, ಬದ್ಧತೆ, ಶಿಸ್ತೇ ಕಾರಣವಾಗಿದೆ. ತಂಬೂರಿ ಎಂಬುದೇ ಭಜನೆಯತ್ತ ಆಕರ್ಷಿತವನ್ನಾಗಿಸುವ ಹೆಸರಾಗಿದೆ. ಭಜನೆಗೆ ಭಾವ, ಸಂಗೀತ, ಲಯಗಳ ಅಗತ್ಯವಿರುವುದಿಲ್ಲ. ಹೃದಯದೊಳಗಿನ ಭಕ್ತಿಯ ಭಾವನೆಗಳೇ ಹೊರಬಂದು ಭಜನೆಯಾಗಬೇಕೆಂದರು.


ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಭಜನಾ ಸ್ಫರ್ಧೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಜನಾ ಮಂಡಳಿ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾಪನೆ ಇದೆ. ತಕ್ಷಣ ಆ ಪ್ರಸ್ತಾಪಕ್ಕೆ ಸ್ವರೂಪ ಕೊಡುವ ಕಾರ್ಯಕ್ಕೆ ಮುಂದಾಗಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದರು.
ಕಳೆದ ವಾರ ನಡೆದ ಪುರುಷರ ಭಜನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡದವರಿಗೆ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಯಶಸ್ಸಿನ ಮುಖ್ಯ ರೂವಾರಿ ಪ್ರವೀಣ್ ಎಸ್. ಕುಂಪಲ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದಿಸಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, MEIL ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ವೀಣಾ ಮಂಗಳ, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ನಿಶಾಂತ್ ಮೊದಲಾದವರು ಇದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಕುಂಪಲ ನಿರೂಪಿಸಿದರು.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm