ಬ್ರೇಕಿಂಗ್ ನ್ಯೂಸ್
21-11-24 03:50 pm Mangalore Correspondent ಕರಾವಳಿ
ಮಂಗಳೂರು, ನ.21: ಲೋಕಾಯುಕ್ತ ಅಧಿಕಾರಿಗಳು ಮತ್ತೆ ಭ್ರಷ್ಟರ ಬೇಟೆ ಆರಂಭಿಸಿದ್ದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಎಂಸಿ ಕೃಷ್ಣವೇಣಿ ಅವರ ಬೆಂಗಳೂರು, ಚಿಕ್ಕಬಳ್ಳಾಪುರದ ಮನೆಗಳು ಮತ್ತು ಮಂಗಳೂರಿನ ಮನೆ, ಕಚೇರಿಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದರು. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದ ಮನೆಗೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಗಣಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿದ್ದರು.
ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆಯೂ ರೇಡ್ ನಡೆದಿದೆ. ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆಗಳಿಗೆ ದಾಳಿ ನಡೆದಿದೆ.
A team of Lokayukta officers from the city and Chikkaballapur raided the residence and office of Krishnaveni, an officer in the mines and geology department, in the early hours of Thursday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am