ಬ್ರೇಕಿಂಗ್ ನ್ಯೂಸ್
21-11-24 03:50 pm Mangalore Correspondent ಕರಾವಳಿ
ಮಂಗಳೂರು, ನ.21: ಲೋಕಾಯುಕ್ತ ಅಧಿಕಾರಿಗಳು ಮತ್ತೆ ಭ್ರಷ್ಟರ ಬೇಟೆ ಆರಂಭಿಸಿದ್ದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಎಂಸಿ ಕೃಷ್ಣವೇಣಿ ಅವರ ಬೆಂಗಳೂರು, ಚಿಕ್ಕಬಳ್ಳಾಪುರದ ಮನೆಗಳು ಮತ್ತು ಮಂಗಳೂರಿನ ಮನೆ, ಕಚೇರಿಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದರು. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದ ಮನೆಗೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಗಣಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿದ್ದರು.
ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆಯೂ ರೇಡ್ ನಡೆದಿದೆ. ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆಗಳಿಗೆ ದಾಳಿ ನಡೆದಿದೆ.
A team of Lokayukta officers from the city and Chikkaballapur raided the residence and office of Krishnaveni, an officer in the mines and geology department, in the early hours of Thursday.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am