ಬ್ರೇಕಿಂಗ್ ನ್ಯೂಸ್
22-11-24 10:17 pm Mangalore Correspondent ಕರಾವಳಿ
ಉಳ್ಳಾಲ, ನ.22 : ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ. ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದಾರೆ.
ಇದೇ ವೇಳೆ, ಲೋಕೋಪಯೋಗಿ ರಸ್ತೆ ಅತಿಕ್ರಮಿಸಿರುವ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಬೋರ್ಡ್ ಗಳನ್ನ ಕೆಡವಲು ನಿಮಗೆ ತಾಕತ್ತಿಲ್ಲವೇ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್ ಆರ್.ಬಿ, ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಅತಿಕ್ರಮಿತ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ದೇರಳಕಟ್ಟೆಯಿಂದ ಕುತ್ತಾರು, ಪಂಡಿತ್ ಹೌಸ್ ತನಕದ ರಸ್ತೆ ಇಕ್ಕೆಲಗಳನ್ನ ಅತಿಕ್ರಮಿಸಿದ ಅಂಗಡಿ, ಮಳಿಗೆಗಳನ್ನ ಜೆಸಿಬಿ ಯಂತ್ರದಿಂದ ಕೆಡವಲಾಗಿದೆ. ಅಂಗಡಿ, ಮಳಿಗೆಗಳ ಮುಂದೆ ರಸ್ತೆ ಅತಿಕ್ರಮಿಸಿ ಅಳವಡಿಸಲಾಗಿದ್ದ ಶೀಟ್ ಛಾವಣಿ, ಆವರಣ ಗೋಡೆ, ಇಂಟರ್ ಲಾಕ್ ಗಳನ್ನ ಕೆಡವಲಾಗಿದೆ.



ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು ಅಂಗಡಿಗಳಲ್ಲಿ ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹ ಬಡ ವ್ಯಾಪಾರಿಗಳು ನಷ್ಟ, ಸಮಸ್ಯೆ ಅನುಭವಿಸುವಂತಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಯವರು ರಸ್ತೆಯನ್ನ ಅತಿಕ್ರಮಿಸಿ ದೊಡ್ಡ ದೊಡ್ಡ ಬೋರ್ಡ್ ಗಳನ್ನ ಹಾಕಿದ್ದು ಉಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಾಕತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಲೋಕೋಪಯೋಗಿ ರಸ್ತೆ ಅತಿಕ್ರಮಿತ ಅಂಗಡಿ, ಮುಂಗಟ್ಟುಗಳಿಗೆ ನಾವು ಇಲಾಖೆಯಿಂದ ಕಳೆದ ಆರು ತಿಂಗಳಿಂದ ಮೂರು ಬಾರಿ ನೋಟೀಸು ನೀಡಿದ್ದೇವೆ. ಅಷ್ಟಲ್ಲದೆ ಅಂಗಡಿಗಳ ಗೋಡೆಗೂ ನೋಟೀಸನ್ನ ಅಂಟಿಸಿದ್ದೇವೆ. ಕೆಲ ಅಂಗಡಿ ಮಾಲೀಕರು ಅದನ್ನ ಲೆಕ್ಕಿಸದೆ ನೋಟೀಸ್ಗೆ ಪೈಂಟ್ ಬಳಿದಿದ್ದಾರೆ. ರಸ್ತೆ ಅತಿಕ್ರಮಿತ ಮಳಿಗೆಗಳನ್ನ ತೆರವುಗೊಳಿಸಲು ನಮಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಹಾಗಾಗಿ ತೆರವು ಕಾರ್ಯಾಚರಣೆ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.
Mangalore Kuthar Illegal buildings vandalised. People protest against officals for not touching illegal hospital building premises over encroachment
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm