ಬ್ರೇಕಿಂಗ್ ನ್ಯೂಸ್
22-11-24 10:33 pm Mangalore Correspondent ಕರಾವಳಿ
ಉಳ್ಳಾಲ, ನ.22: ಗ್ರಾಮೀಣ ಪ್ರದೇಶ ಸಜಿಪದಿಂದ ಕಲ್ಲಾಪು ನಗರ ಪ್ರದೇಶಕ್ಕೆ ನೇತ್ರಾವತಿ ನದಿ ತೀರದಲ್ಲಿ ತಡೆಗೋಡೆ ಕಮ್ ನೇರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಎರಡನೇ ಹಂತದ ಕಾಮಗಾರಿಗೆ ಸ್ಪೀಕರ್ ಯು.ಟಿ ಖಾದರ್ ಹರೇಕಳದಲ್ಲಿ ಶಿಲಾನ್ಯಾಸ ನೆರವೇರಿಸಿದರು.
ಸಜಿಪ ಗ್ರಾಮ ಮತ್ತು ಉಳ್ಳಾಲ ನಗರ ಪ್ರದೇಶ ಸಂಪರ್ಕ ರಸ್ತೆಯ ದೂರದೃಷ್ಟಿಯ ಯೋಜನೆಯ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸಗೈದ ಸ್ಪೀಕರ್ ಖಾದರ್ ಮಾತನಾಡಿ, ನೇತ್ರಾವತಿ ನದಿ ತೀರದಲ್ಲಿ ಹರೇಕಳದಿಂದ ಕಲ್ಲಾಪು ಸಂಪರ್ಕದ ತಡೆಗೋಡೆ ಮತ್ತು ರಸ್ತೆ ನಿರ್ಮಾಣ ಯೋಜನೆಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದೆ.ಇದೀಗ ಹರೇಕಳ-ಪಾವೂರು-ಸಜಿಪಕ್ಕೆ ನೇರ ಸಂಪರ್ಕದ ತಡೆಗೋಡೆ ಮತ್ತು ರಸ್ತೆ ನಿರ್ಮಾಣದ ಎರಡನೇ ಹಂತದ ಕಾಮಗಾರಿಯು ಹನ್ನೆರಡು ಕೋಟಿ ರೂಪಾಯಿ ಅನುದಾನದಿಂದ ನಡೆಯಲಿದೆ. ಕಲ್ಲಾಪುವಿನಿಂದ ಸಜಿಪದ ವರೆಗಿನ ತಡೆಗೋಡೆ ಕಮ್ ರಸ್ತೆ ನಿರ್ಮಾಣ ಕಾಮಗಾರಿಗೆ ನೂರು ಕೋಟಿ ರೂಪಾಯಿ ಹೆಚ್ಚುವರಿ ಅನುದಾನದ ಪ್ರಸ್ತಾವನೆಯನ್ನ ಸಣ್ಣ ನೀರಾವರಿ ಸಚಿವರಿಗೆ ಸಲ್ಲಿಸಿದ್ದೇನೆ.


ನನ್ನ ಕ್ಷೇತ್ರದ ಎರಡು ಮಹತ್ತರ ಯೋಜನೆಗಳ ಪ್ರಸ್ತಾವನೆಯು ಅಂಗೀಕಾರವಾದ ನಂತರ, ಕಲ್ಲಾಪು-ಸಜಿಪ ರಸ್ತೆ ನಿರ್ಮಾಣ ಯೋಜನೆಗೆ ಹೆಚ್ಚುವರಿ ನೂರು ಕೋಟಿ ಅನುದಾನ ಬಿಡುಗಡೆಯಾಗುವ ವಿಶ್ವಾಸವಿದೆ. ಹಂತ ಹಂತವಾಗಿ ರಸ್ತೆ ನಿರ್ಮಾಣದ ಕೆಲಸ ಪೂರ್ಣಗೊಳ್ಳಲಿದೆ.ನೇತ್ರಾವತಿ ನದಿ ಪಾತ್ರದ ಜನರು ಮಳೆಗಾಲದ ನೆರೆಯಿಂದ ಬಹಳಷ್ಟು ಸಮಸ್ಯೆ ಅನುಭವಿಸಿದ್ದಾರೆ.ಅವರ ಸಹನೆ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ.
ನದಿ ತೀರದ ರಸ್ತೆ ನಿರ್ಮಾಣ ಯೋಜನೆ ಸಂಪೂರ್ಣಗೊಂಡ ಬಳಿಕ ಪಾವೂರು, ಹರೇಕಳ, ಸಜಿಪದಂತಹ ಗ್ರಾಮೀಣ ಭಾಗವು ನಗರ ಪ್ರದೇಶಕ್ಕೆ ಹತ್ತಿರವಾಗಿ ಚಿತ್ರಣವೇ ಬದಲಾಗಲಿದೆ. ಭವಿಷ್ಯದಲ್ಲಿ ಈ ರಸ್ತೆಯು ಜನರಿಗೆ ಬಹಳಷ್ಟು ಉಪಯೋಗಕಾರಿಯಾಗಲಿದ್ದು,ಹೊಸ ಯೋಜನೆಗಳು ಬಂದು ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಕಾಣಲಿದೆ ಎಂದರು.
ನಗರದಿಂದ ಪಾವೂರು ಉಳಿಯ ದ್ವೀಪ ಸಂಪರ್ಕದ ತೂಗುಸೇತುವೆ ನಿರ್ಮಾಣ ಯೋಜನೆಯೂ ಅಂತಿಮ ಹಂತದಲ್ಲಿದೆ. ಕಡತಗಳ ಕೆಲಸಗಳೆಲ್ಲವೂ ಮುಗಿದಿದ್ದು, ಶೀಘ್ರವೇ ಉಳಿಯ ಪ್ರದೇಶ ಸಂಪರ್ಕದ ತೂಗು ಸೇತುವೆಯೂ ನಿರ್ಮಾಣಗೊಳ್ಳಲಿದೆ ಎಂದು ಯು.ಟಿ.ಖಾದರ್ ಹೇಳಿದರು.
ಹರೇಕಳದಿಂದ ಸಜಿಪದ ವರೆಗೆ ದೋಣಿ ಮೂಲಕ ಸಾಗಿದ ಸ್ಪೀಕರ್ ಖಾದರ್ ಅವರು ತಡೆಗೋಡೆ ಕಮ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುವ ಪ್ರದೇಶದ ಸ್ಥಳ ಪರಿಶೀಲನೆ ನಡೆಸಿದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು , ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್, ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಮಜೀದ್ ಮೊದಲಾದವರು ಉಪಸ್ಥಿತರಿದ್ದರು.
Barrier cum-road construction along Netravati banks from Sajipa village to Kallap, Speaker Khader inspects site by boat.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm