ಬ್ರೇಕಿಂಗ್ ನ್ಯೂಸ್
13-12-20 07:55 pm Mangaluru Correspondent ಕರಾವಳಿ
ಸುಳ್ಯ, ಡಿ.12: ಶಾಲಾ ಮೈದಾನಕ್ಕೆ ಸೈಕಲ್ ಕಲಿಯಲು ಬಂದಿದ್ದ ಎಂಟು ವರ್ಷದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದ ಶಾಲೆಯ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸುಳ್ಯದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಹೆತ್ತವರ ದೂರಿನ ಮೇರೆಗೆ ಆಡಳಿತಾಧಿಕಾರಿಯನ್ನು ವಜಾಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ದೇವಚಳ್ಳ ಗ್ರಾಮದ ಎಲಿಮಲೆಯ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಗೆಳತಿಯರೊಂದಿಗೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯ ಆವರಣದಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ಹೇಳಿದ್ದಾನೆ. ಈ ವೇಳೆ ಆಕೆಯನ್ನು ಪುಸಲಾಯಿಸಿ ತನ್ನ ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಲಾಗುತ್ತಿದೆ. ನಂತರ ಮನೆಗೆ ತೆರಳಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಆರೋಪಿ ವ್ಯಕ್ತಿಯನ್ನು ಆಡಳಿತ ಮಂಡಳಿಯವರು ವಿಚಾರಿಸಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆಯವರು ಪೊಲೀಸ್ ದೂರು ನೀಡದಂತೆ ಶಾಲೆಯ ಆಡಳಿತ ಮಂಡಳಿ ಮನವೊಲಿಸಿದ್ದಾರೆ. ಹೀಗಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಈ ವಿಚಾರ ಮಾಧ್ಯಮದಲ್ಲಿ ಬರುತ್ತಿದ್ದಂತೆ, ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಚೈಲ್ಡ್ ಲೈನ್ ಸಂಸ್ಥೆಯವರು ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಿ ವರದಿ ನೀಡಲಿದ್ದು ಕಿರುಕುಳ ಕಂಡುಬಂದರೆ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದೆ.
ಇದು ಮೂರನೇ ಪ್ರಕರಣ !!
ಇದೇ ಶಾಲೆಯಲ್ಲಿ ಈ ಹಿಂದೆಯೂ ಇದೇ ರೀತಿಯದ್ದೇ ಪ್ರಕರಣ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಎರಡು ವರ್ಷಗಳ ಹಿಂದೆ ಇದೇ ಶಾಲೆಯ ಶಿಕ್ಷಕರಾಗಿದ್ದವರು ಸುಳ್ಯದಲ್ಲಿ ಬಾತ್ ರೂಮ್ ಒಂದರಲ್ಲಿ ಫೋಟೊ ಕ್ಲಿಕ್ಕಿಸಿ ಸಿಕ್ಕಿಬಿದ್ದಿದ್ದರು. ಆನಂತರ ಅವರನ್ನು ವಜಾ ಮಾಡಲಾಗಿತ್ತು. ಐದು ವರ್ಷಗಳ ಹಿಂದೆ ಶಿಕ್ಷಕಿಯೊಬ್ಬರು ಬೇರೊಬ್ಬರ ಜೊತೆ ಹೋಗಿದ್ದರೆಂದು ವಿವಾದ ಆಗಿತ್ತು. ಸಂಸ್ಕಾರದ ಶಿಕ್ಷಣ ನೀಡುವ ಶಾಲೆಯೊಂದು ಈ ರೀತಿಯ ಪ್ರಕರಣಗಳಿಂದ ಸುದ್ದಿಯಾಗಿರುವುದು ವಿಪರ್ಯಾಸ.
Eight-year-old Girl has been sexually Harassed by the School Administrator in Sullia, Dakshina Kannada. It is said the cruel act was done while the girl was cycling in the school ground.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm