ಬ್ರೇಕಿಂಗ್ ನ್ಯೂಸ್
24-11-24 01:18 pm Mangalore Correspondent ಕರಾವಳಿ
ಉಳ್ಳಾಲ, ನ.24: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆ(ಬಂಡೆ)ಯಿಂದ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯನ್ನ ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಸೇರಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನಲ್ಲಿ ಕಾಲೇಜು ಕಲಿಯುತ್ತಿದ್ದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ.


ಇಂದು ಬೆಳಗ್ಗೆ ವಿದ್ಯಾರ್ಥಿನಿ ಸಮುದ್ರ ತೀರದ ರುದ್ರಪಾದೆಯಿಂದ ನೀರಿಗೆ ಜಿಗಿದಿದ್ದಾಳೆ. ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವ ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಿಸಿ ದಡದತ್ತ ಸೆಳೆಯಲು ಮುಂದಾಗಿದ್ದಾನೆ. ಆದರೆ ಯುವತಿ ಪ್ರಾಣ ಸಂಕಟದಿಂದ ವಲಸೆ ಕಾರ್ಮಿಕನನ್ನು ಗಟ್ಟಿಯಾಗಿ ಬಿಗಿದಪ್ಪಿದ್ದು, ಇಬ್ಬರೂ ನೀರುಪಾಲಾಗುವ ಅಪಾಯಕ್ಕೀಡಾಗಿದ್ದರು. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಸ್ಥಳೀಯರು ಜೀವ ರಕ್ಷಕ ಸಿಬ್ಬಂದಿ ಸುಜಿತ್ ಗೆ ಸಹಕಾರ ನೀಡಿದ್ದಾರೆ.
ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Mangalore college student girl attempts suicide by jumping into Someshwara sea, rescued by life gaurds. A labourer form other state immediately jumped into the water to rescue her
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am