ಬ್ರೇಕಿಂಗ್ ನ್ಯೂಸ್
26-11-24 05:37 pm Mangaluru Correspondent ಕರಾವಳಿ
ಮಂಗಳೂರು, ನ.26: ಮಂಗಳೂರಿನ ಪೊಲೀಸ್ ಕಮಿಷನರ್ ಬಿಜೆಪಿ ಶಾಸಕರು, ಸಂಸದರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಇರುವಾಗಲೂ ನಾವು ಇಷ್ಟೊಂದು ಕಿರುಕುಳ ಅನುಭವಿಸಿರಲಿಲ್ಲ. ಹೆದ್ದಾರಿ ಬದಿ ಪ್ರತಿಭಟನೆ ನಡೆಸುತ್ತೇವೆ ಎಂದರೆ ಕಮಿಷನರ್, ಡಿಸಿಪಿಯವರು ಪ್ರಚಾರಕ್ಕೆ ಮಾಡ್ತೀವಿ ಎನ್ನುತ್ತಿದ್ದಾರೆ. ಒಬ್ಬ ಕಾನ್ಸ್ ಟೇಬಲ್ ಗೆ ಇರುವಷ್ಟು ತಿಳುವಳಿಕೆ ಇಲ್ಲಿನ ಕಮಿಷನರ್ ಗಿಲ್ಲ. ಕಮಿಷನರ್ ಇದೇ ರೀತಿಯಾದರೆ ಕಮಿಷನರ್ ಕಚೇರಿಗೆ ಜಾಥಾ ತೆರಳಿ ಹಠಾವೋ ಮಾಡ್ತೀವಿ ಎಂದು ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುರತ್ಕಲ್ ನಿಂದ ನಂತೂರು ವರೆಗಿನ ಹೆದ್ದಾರಿ ನರಕವಾಗಿದೆಯೆಂದು ಸಮಾನ ಮನಸ್ಕ ಸಂಘಟನೆಗಳವರು ಸೇರಿ ಕುಳೂರಿನ ಹೆದ್ದಾರಿ ಬದಿಯಲ್ಲಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ಆದರೆ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಕಮಿಷನರ್ ಹೇಳಿರುವುದಕ್ಕೆ ಧರಣಿ ನಿರತರ ಆಕ್ರೋಶ ಪೊಲೀಸ್ ಆಯುಕ್ತರ ಮೇಲೆ ತಿರುಗಿದೆ. ನಾವು 5-6 ವರ್ಷಗಳ ಕಾಲ ಪ್ರತಿಭಟನೆ ನಡೆಸಿ ಸುರತ್ಕಲ್ ಟೋಲ್ ಗೇಟ್ ತೆರವು ಮಾಡಿದ್ದೇವೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಮಂಗಳೂರಿನ ಜನಪರ ಚಳವಳಿ ಬಗ್ಗೆ ತಿಳಿದಿಲ್ಲ. ಪ್ರಶ್ನೆ ಮಾಡಿದರೆ ಎಫ್ಐಆರ್ ಹಾಕುವ ಬೆದರಿಕೆ ಹಾಕುತ್ತಾರೆ.
ಕಚೇರಿಗೆ ಹೋದರೆ ಮುಖಕ್ಕೆ ಮುಖ ಕೊಟ್ಟು ಮಾತನಾಡಲ್ಲ. ಕಚೇರಿಯೊಳಗೆ ಹೋಗಬೇಕಿದ್ದರೆ ಮೊಬೈಲ್ ಹೊರಗಿಟ್ಟು ಹೋಗಬೇಕು. ಇವರು ಜನರ ಜೊತೆ ವ್ಯವಹರಿಸುವ ರೀತಿಯಾ ಇದು. ಮಂಗಳೂರಿನಲ್ಲಿ ಮಸಾಜ್ ಪಾರ್ಲರ್ ದಂಧೆಯಿಂದ ತೊಡಗಿ ಮರಳು ದಂಧೆ, ಮಟ್ಕಾ, ಇಸ್ಪೀಟ್, ಡ್ರಗ್ಸ್, ಮಟ್ಕಾ, ಬೆಟ್ಟಿಂಗ್, ದೋ ನಂಬರ್ ದಂಧೆಗಳೆಲ್ಲ ರಾಜಾರೋಷ ನಡೆಯುತ್ತಿದೆ. ಇದಕ್ಕೆಲ್ಲ ಕಮಿಷನರ್ ಕುಮ್ಮಕ್ಕು ಕೊಟ್ಟಿದ್ದಾರೆ. ನಾವಿಲ್ಲಿ ಬಿಸಿಲಲ್ಲಿ ಕುಳಿತಿದ್ದೇವೆ. ಒಂದು ಟೆಂಟ್ ಹಾಕುವುದಕ್ಕೂ ಅನುಮತಿ ಕೊಟ್ಟಿಲ್ಲ. ತಾಲೂಕು ಕಚೇರಿಯ ಎದುರಲ್ಲೇ ಪ್ರತಿಭಟನೆ ಮಾಡಬೇಕೆಂದು ನೋಟೀಸ್ ಕೊಟ್ಟಿದ್ದಾರೆ. ಇವರು ತಮ್ಮ ಕುಮ್ಮಕ್ಕಿನಿಂದ ನಡೆಯುವ ದೋ ನಂಬರ್ ಬಿಸ್ನೆಸ್ ಮಾಡೋರಿಗೂ ಟೆಂಟ್ ಹಾಕಿ ಕೊಡಿಸಲಿ.
ಈ ಕಮಿಷನರ್ ಬಂದ ಮೇಲೆ ನಮ್ಮ ಮೇಲೆ ಮೂರು ಎಫ್ಐಆರ್ ಮಾಡಿದ್ದಾರೆ. ಮೊನ್ನೆ ಶಾಸಕ ಭರತ್ ಶೆಟ್ಟಿ ರಸ್ತೆಯನ್ನು ಎರಡು ದಿನ ಬಂದ್ ಮಾಡಿ, ಕಾರ್ಯಕ್ರಮ ಮಾಡಿದ್ದರು. ಅದನ್ನು ಪ್ರಶ್ನೆ ಮಾಡುವ ತಾಕತ್ತು ಇವರಿಗಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನು ಪೊಲೀಸ್ ಕಮಿಷನರ್ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಜಾರಿಗೆ ತರುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತೇವೆ ಎಂದರೆ ಹೆದ್ದಾರಿ ಇಲಾಖೆಯ ಪರ್ಮಿಶನ್ ಕೇಳುತ್ತಿದ್ದಾರೆ. ಮಂಗಳೂರಿನ ಮಿನಿ ವಿಧಾನಸೌಧ ಎದುರಲ್ಲೇ ಪ್ರತಿಭಟನೆ ಮಾಡಬೇಕೆಂದು ಫರ್ಮಾನು ಹೊರಡಿಸುತ್ತಾರೆ. ಪ್ರಶ್ನೆ ಮಾಡಿದರೆ ಸರ್ವಾಧಿಕಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತೇನೆ ಎಂದು ಪೋಸ್ಟ್ ಹಾಕಿದ್ದಕ್ಕೆ ಮನೆಗೆ ಪೊಲೀಸರನ್ನು ಕಳಿಸಿ ಬೆದರಿಸಿದ್ದಾರೆ. ನಾವೇನು ಉಗ್ರಗಾಮಿಗಳಾ.. ಇವರೇನು ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆಯೇ.. ಇವರ ವಿರುದ್ಧ ನಾವು ಮುಖ್ಯಮಂತ್ರಿ, ಗೃಹಮಂತ್ರಿಗೆ ದೂರು ನೀಡಲಿದ್ದೇವೆ. ಕ್ರೈಮ್ ಬೆಂಬಲಿಗ, ದಂಧೆಗಳ ಪೋಷಕ ಕಮಿಷನರ್ ಹಠಾವೋ ಹೋರಾಟ ಕೈಗೆತ್ತಿಕೊಳ್ಳುತ್ತೇವೆ, ಅವರಿಗೆ ಸಾಧ್ಯವಿದ್ದರೆ ನಮ್ಮನ್ನು ಎದುರಿಸಲಿ. ಜೈಲಿಗಟ್ಟಲಿ ಎಂದು ಸವಾಲು ಹಾಕಿದರು.
Mangalore DFYI Leader Muneer Katipalla slams Police commissioner Anupam Agarwal is a dictator, alleges as most corrupted. He also said that commissioner takes money to all illegal businesses in city. Spoke during the highway protest held at Nanthoor.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm