ಬ್ರೇಕಿಂಗ್ ನ್ಯೂಸ್
26-11-24 08:23 pm Udupi Correspondent ಕರಾವಳಿ
ಉಡುಪಿ, ನ 26: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ದೇಶದ ಮೂಲೆ ಮೂಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲದೇ, ಖ್ಯಾತ ಸೆಲೆಬ್ರಿಟಿಗಳು ಕೂಡಾ ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅದರಂತೆ ತಮಿಳು ಚಿತ್ರರಂಗದ ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ದಂಪತಿ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ಸೌತ್ ಸೂಪರ್ ಸ್ಟಾರ್ ಸೂರ್ಯ ಲೇಟೆಸ್ಟ್ ಸಿನಿಮಾ 'ಕಂಗುವ' ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ನಲ್ಲಿ ನಿರಾಶಾದಾಯಕ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆಗಳಿತ್ತು. ಬಿಡುಗಡೆಗೂ ಮುನ್ನ ಇದ್ದ ಸದ್ದು ಈಗಿಲ್ಲ. ಭವ್ಯ ದೃಶ್ಯಗಳು, ಸ್ಟಾರ್ ಪವರ್ನಿಂದ ಕೂಡಿದ್ದರೂ ಚಿತ್ರದ ಕಲೆಕ್ಷನ್ ವೇಗ ನಿರೀಕ್ಷಿತ ಮಟ್ಟದಲ್ಲಿಲ್ಲ. ತೆರೆಕಂಡ 12ನೇ ದಿನದಂದು, ಕಂಗುವ ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ ಹೆಚ್ಚಿನ ಕುಸಿತ ಕಂಡಿದೆ.
ಸ್ಯಾಕ್ನಿಲ್ಕ್ ಮಾಹಿತಿ ಪ್ರಕಾರ, ಕಂಗುವ ಕಳೆದ ದಿನ 37 ಲಕ್ಷ ರೂ. ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಮುಖ ಮಾರುಕಟ್ಟೆಯಾಗಿರುವ ತಮಿಳು ಆವೃತ್ತಿಯಿಂದ 16 ಲಕ್ಷ ರೂಪಾಯಿ ಬಂದಿದೆ. ಕಂಗುವ ತನ್ನ ಮೊದಲ 12 ದಿನಗಳಲ್ಲಿ, ಭಾರತದಲ್ಲಿ ಒಟ್ಟು 67.87 ಕೋಟಿ ರೂಪಾಯಿ ಗಳಿಸಿದೆ. ಚಿತ್ರದ ಮೊದಲ ವಾರದ ಪ್ರದರ್ಶನ ನಿರೀಕ್ಷೆಗಿಂತಲೂ ಕಡಿಮೆ ಆಗಿದ್ದು, 64.3 ಕೋಟಿ ರೂ. ವ್ಯವಹಾರ ನಡೆಸಿದೆ. ತಮಿಳುನಾಡಿನಿಂದಲೇ ಒಟ್ಟು 35.63 ಕೋಟಿ ರೂ. ಬಂದಿದೆ. ಎರಡನೇ ವಾರದಲ್ಲಿ, ವಿಶೇಷವಾಗಿ 12ನೇ ದಿನದಂದು ಕಲೆಕ್ಷನ್ನಲ್ಲಿ ಕುಸಿತ ಕಂಡಿದ್ದು, 100 ಕೋಟಿ ರೂ. ದಾಟುತ್ತೋ ಇಲ್ವೋ ಅನ್ನೋ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.
ಈಗ ಸಿನಿಮಾದ ಯಶಸ್ಸಿಗಾಗಿ ಸ್ಟಾರ್ ದಂಪತಿಗಳು ದೇಶದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
Renowned Tamil actor Suriya and his wife, actress Jyothika, were spotted at the Kollur Mookambika Temple in Udupi's Baindoor taluk on Tuesday.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm