ಬ್ರೇಕಿಂಗ್ ನ್ಯೂಸ್
26-11-24 08:23 pm Udupi Correspondent ಕರಾವಳಿ
ಉಡುಪಿ, ನ 26: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ದೇಶದ ಮೂಲೆ ಮೂಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲದೇ, ಖ್ಯಾತ ಸೆಲೆಬ್ರಿಟಿಗಳು ಕೂಡಾ ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅದರಂತೆ ತಮಿಳು ಚಿತ್ರರಂಗದ ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ದಂಪತಿ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ಸೌತ್ ಸೂಪರ್ ಸ್ಟಾರ್ ಸೂರ್ಯ ಲೇಟೆಸ್ಟ್ ಸಿನಿಮಾ 'ಕಂಗುವ' ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ನಲ್ಲಿ ನಿರಾಶಾದಾಯಕ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆಗಳಿತ್ತು. ಬಿಡುಗಡೆಗೂ ಮುನ್ನ ಇದ್ದ ಸದ್ದು ಈಗಿಲ್ಲ. ಭವ್ಯ ದೃಶ್ಯಗಳು, ಸ್ಟಾರ್ ಪವರ್ನಿಂದ ಕೂಡಿದ್ದರೂ ಚಿತ್ರದ ಕಲೆಕ್ಷನ್ ವೇಗ ನಿರೀಕ್ಷಿತ ಮಟ್ಟದಲ್ಲಿಲ್ಲ. ತೆರೆಕಂಡ 12ನೇ ದಿನದಂದು, ಕಂಗುವ ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ ಹೆಚ್ಚಿನ ಕುಸಿತ ಕಂಡಿದೆ.
ಸ್ಯಾಕ್ನಿಲ್ಕ್ ಮಾಹಿತಿ ಪ್ರಕಾರ, ಕಂಗುವ ಕಳೆದ ದಿನ 37 ಲಕ್ಷ ರೂ. ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಮುಖ ಮಾರುಕಟ್ಟೆಯಾಗಿರುವ ತಮಿಳು ಆವೃತ್ತಿಯಿಂದ 16 ಲಕ್ಷ ರೂಪಾಯಿ ಬಂದಿದೆ. ಕಂಗುವ ತನ್ನ ಮೊದಲ 12 ದಿನಗಳಲ್ಲಿ, ಭಾರತದಲ್ಲಿ ಒಟ್ಟು 67.87 ಕೋಟಿ ರೂಪಾಯಿ ಗಳಿಸಿದೆ. ಚಿತ್ರದ ಮೊದಲ ವಾರದ ಪ್ರದರ್ಶನ ನಿರೀಕ್ಷೆಗಿಂತಲೂ ಕಡಿಮೆ ಆಗಿದ್ದು, 64.3 ಕೋಟಿ ರೂ. ವ್ಯವಹಾರ ನಡೆಸಿದೆ. ತಮಿಳುನಾಡಿನಿಂದಲೇ ಒಟ್ಟು 35.63 ಕೋಟಿ ರೂ. ಬಂದಿದೆ. ಎರಡನೇ ವಾರದಲ್ಲಿ, ವಿಶೇಷವಾಗಿ 12ನೇ ದಿನದಂದು ಕಲೆಕ್ಷನ್ನಲ್ಲಿ ಕುಸಿತ ಕಂಡಿದ್ದು, 100 ಕೋಟಿ ರೂ. ದಾಟುತ್ತೋ ಇಲ್ವೋ ಅನ್ನೋ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.
ಈಗ ಸಿನಿಮಾದ ಯಶಸ್ಸಿಗಾಗಿ ಸ್ಟಾರ್ ದಂಪತಿಗಳು ದೇಶದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
Renowned Tamil actor Suriya and his wife, actress Jyothika, were spotted at the Kollur Mookambika Temple in Udupi's Baindoor taluk on Tuesday.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm