ಬ್ರೇಕಿಂಗ್ ನ್ಯೂಸ್
26-11-24 08:23 pm Udupi Correspondent ಕರಾವಳಿ
ಉಡುಪಿ, ನ 26: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ದೇಶದ ಮೂಲೆ ಮೂಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲದೇ, ಖ್ಯಾತ ಸೆಲೆಬ್ರಿಟಿಗಳು ಕೂಡಾ ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅದರಂತೆ ತಮಿಳು ಚಿತ್ರರಂಗದ ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ದಂಪತಿ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ಸೌತ್ ಸೂಪರ್ ಸ್ಟಾರ್ ಸೂರ್ಯ ಲೇಟೆಸ್ಟ್ ಸಿನಿಮಾ 'ಕಂಗುವ' ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ನಲ್ಲಿ ನಿರಾಶಾದಾಯಕ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆಗಳಿತ್ತು. ಬಿಡುಗಡೆಗೂ ಮುನ್ನ ಇದ್ದ ಸದ್ದು ಈಗಿಲ್ಲ. ಭವ್ಯ ದೃಶ್ಯಗಳು, ಸ್ಟಾರ್ ಪವರ್ನಿಂದ ಕೂಡಿದ್ದರೂ ಚಿತ್ರದ ಕಲೆಕ್ಷನ್ ವೇಗ ನಿರೀಕ್ಷಿತ ಮಟ್ಟದಲ್ಲಿಲ್ಲ. ತೆರೆಕಂಡ 12ನೇ ದಿನದಂದು, ಕಂಗುವ ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ ಹೆಚ್ಚಿನ ಕುಸಿತ ಕಂಡಿದೆ.
ಸ್ಯಾಕ್ನಿಲ್ಕ್ ಮಾಹಿತಿ ಪ್ರಕಾರ, ಕಂಗುವ ಕಳೆದ ದಿನ 37 ಲಕ್ಷ ರೂ. ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಮುಖ ಮಾರುಕಟ್ಟೆಯಾಗಿರುವ ತಮಿಳು ಆವೃತ್ತಿಯಿಂದ 16 ಲಕ್ಷ ರೂಪಾಯಿ ಬಂದಿದೆ. ಕಂಗುವ ತನ್ನ ಮೊದಲ 12 ದಿನಗಳಲ್ಲಿ, ಭಾರತದಲ್ಲಿ ಒಟ್ಟು 67.87 ಕೋಟಿ ರೂಪಾಯಿ ಗಳಿಸಿದೆ. ಚಿತ್ರದ ಮೊದಲ ವಾರದ ಪ್ರದರ್ಶನ ನಿರೀಕ್ಷೆಗಿಂತಲೂ ಕಡಿಮೆ ಆಗಿದ್ದು, 64.3 ಕೋಟಿ ರೂ. ವ್ಯವಹಾರ ನಡೆಸಿದೆ. ತಮಿಳುನಾಡಿನಿಂದಲೇ ಒಟ್ಟು 35.63 ಕೋಟಿ ರೂ. ಬಂದಿದೆ. ಎರಡನೇ ವಾರದಲ್ಲಿ, ವಿಶೇಷವಾಗಿ 12ನೇ ದಿನದಂದು ಕಲೆಕ್ಷನ್ನಲ್ಲಿ ಕುಸಿತ ಕಂಡಿದ್ದು, 100 ಕೋಟಿ ರೂ. ದಾಟುತ್ತೋ ಇಲ್ವೋ ಅನ್ನೋ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.
ಈಗ ಸಿನಿಮಾದ ಯಶಸ್ಸಿಗಾಗಿ ಸ್ಟಾರ್ ದಂಪತಿಗಳು ದೇಶದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
Renowned Tamil actor Suriya and his wife, actress Jyothika, were spotted at the Kollur Mookambika Temple in Udupi's Baindoor taluk on Tuesday.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am