ಬ್ರೇಕಿಂಗ್ ನ್ಯೂಸ್
26-11-24 10:50 pm Mangalore Correspondent ಕರಾವಳಿ
ಮಂಗಳೂರು, ನ.26: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಮಹಿಳೆಯೊಬ್ಬರ ಮಗುವನ್ನು ಸಿಬಂದಿ ಮಾರಾಟ ಮಾಡಿದ್ದಾರೆ ಎಂದು ಬರೆದ ಪತ್ರವೊಂದು ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟನೆ ನೀಡಿದ್ದು, ಅಂತಹ ಆರೋಪ ನಿರಾಧಾರವಾದದ್ದು ಎಂದು ತಿಳಿಸಿದ್ದಾರೆ.
ಎಡಪದವು ನಿವಾಸಿ ಭವ್ಯ ಎನ್ನುವ ಮಹಿಳೆ ಬರೆದ ಪತ್ರದಲ್ಲಿ ಆಗಸ್ಟ್ 18ರಂದು ತಾನು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ತನ್ನ ಮಗುವನ್ನು ಸಿಬಂದಿ ಬೇರೆ ಯಾರಿಗೋ ಮಾರಾಟ ಮಾಡಿದ್ದಾರೆ. ತಾನು 9 ತಿಂಗಳು ಕಷ್ಟಪಟ್ಟು ಸಲಹಿದ್ದು ಈಗ ಮಗು ಇಲ್ಲದ ನೋವನ್ನು ಅನುಭವಿಸುತ್ತಿದ್ದೇನೆ, ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಕೋರಲಾಗಿತ್ತು. ವಾಟ್ಸಪ್ ಜಾಲತಾಣದಲ್ಲಿ ಬರೆದು ಹಾಕಿದ್ದ ಪತ್ರವು ಕಳೆದ ಕೆಲವು ದಿನಗಳಿಂದ ಭಾರೀ ವೈರಲ್ ಆಗಿದ್ದು, ಮಾಧ್ಯಮದ ವಾಟ್ಸಪ್ ಗ್ರೂಪ್ ಗಳಲ್ಲಿಯೂ ಬಂದಿತ್ತು.

ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಆಗಸ್ಟ್ 18ರಂದು ಭವ್ಯ ಎನ್ನುವ ಮಹಿಳೆಗೆ ಹೆರಿಗೆಯಾಗಿದ್ದು, ಮಗುವಿನ ಒಂದು ಕಣ್ಣಿನಲ್ಲಿ ಕಣ್ಣ ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಯ ಗಮನಕ್ಕೆ ತಂದಾಗ ಅದು ಮಗು ತನ್ನದಲ್ಲ ಎಂದು ನಿರಾಕರಿಸಿದ್ದಾರೆ. ಆಸ್ಪತ್ರೆಯ ಸಿಬಂದಿಯೇ ಅದಲು ಬದಲು ಮಾಡಿದ್ದಾರೆ ಎಂದು ಪೊಲೀಸರಿಗೂ ದೂರು ನೀಡಿದ್ದರು. ಆನಂತರ, ಪೊಲೀಸ್ ತನಿಖೆ ನಡೆದು ತಾಯಿ ಮತ್ತು ಮಗುವಿನ ಡಿಎನ್ಎ ಟೆಸ್ಟ್ ವರದಿಯನ್ನು ಸಂಬಂಧಿತರು ನ್ಯಾಯಾಧೀಶರಿಗೆ ಸಲ್ಲಿಸಿದ್ದಾರೆ.
ಸದ್ಯ ಮಹಿಳೆಯ ಮಗುವು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಆದರೆ ಇತ್ತೀಚಿನ ಎರಡು ದಿನಗಳಲ್ಲಿ ಸದ್ರಿ ಮಹಿಳೆಯು ತನ್ನ ಶಿಶುವನ್ನು ಆಸ್ಪತ್ರೆಯ ಸಿಬಂದಿ ಮಾರಾಟ ಮಾಡಿದ್ದಾರೆಂದು ಮಾನಹಾನಿಕರ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಹೆರಿಗೆ ಮತ್ತು ಸ್ತ್ರೀರೋಗ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಆಸ್ಪತ್ರೆಯ ಬಗ್ಗೆ ಕಳಂಕ ತಂದಿದ್ದಾರೆ. ಸದ್ರಿ ಪ್ರಕರಣ ನ್ಯಾಯಾಲಯದಲ್ಲಿದ್ದು ತೀರ್ಪನ್ನು ಗೌರವಪೂರ್ವಕವಾಗಿ ನಿರೀಕ್ಷಿಸುತ್ತಿದ್ದೇವೆ. ಈ ನಡುವೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಬಗ್ಗೆ ಮಾಡಿರುವ ಆರೋಪವು ನಿರಾಧಾರವಾಗಿರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Baby missing in Lady goschen Hospital letter goes viral, hospital issues clarification stating that no such incident has occured.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am