ಬ್ರೇಕಿಂಗ್ ನ್ಯೂಸ್
26-11-24 11:23 pm Udupi Correspondent ಕರಾವಳಿ
ಉಡುಪಿ, ನ 26: ಬ್ರಹ್ಮಾವರ ಠಾಣೆಯ ಪೊಲೀಸರ ವಶದಲ್ಲಿದ್ದ ವೇಳೆ ಕೇರಳದ ಕೊಲ್ಲಂನ ಕೊಟ್ಟಾರಕರ ನಿವಾಸಿ ಬಿಜು ಯೋಹನ್ನಾನ್ (42) ಎಂಬುವವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಅವರ ಕುಟುಂಬದವರು ಕೇರಳ ಮುಖ್ಯಮಂತ್ರಿ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.
ಅಣ್ಣನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದೇವೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿ ವಿಜ್ಞಾನ ಪರೀಕ್ಷೆಯ ವರದಿಗಳು ಇನ್ನೂ ನಮ್ಮ ಕೈಸೇರಿಲ್ಲ. ಅದು ಸಿಕ್ಕಿದ ಕೂಡಲೇ ದೂರು ನೀಡುತ್ತೇವೆ' ಎಂದು ಬಿಜು ಅವರ ತಮ್ಮ ಬಿನು ಯೋಹನ್ನಾನ್ ತಿಳಿಸಿದರು.
ಅಣ್ಣ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ನಮಗೆ ತಿಳಿಸಿದ್ದರು. ನಾವು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಮೃತದೇಹವನ್ನು ನೋಡಿದ್ದೆವು. ಮೊಣಕಾಲು ಮತ್ತು ತೊಡೆಯಲ್ಲಿ ಗಾಯದ ಗುರುತುಗಳಿದ್ದವು ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ' ಎಂದರು.
'ಅಣ್ಣ ಐಟಿಐ ಪೂರೈಸಿದ್ದು, ಬ್ರಹ್ಮಾವರ ಬಳಿಯ ಶಿಪ್ಯಾರ್ಡ್ವೊಂದಕ್ಕೆ ಕೆಲಸಕ್ಕೆ ಬಂದಿದ್ದ. 12 ದಿವಸ ಮಾತ್ರ ಬ್ರಹ್ಮಾವರದಲ್ಲಿ ಉಳಿದುಕೊಂಡಿದ್ದ' ಎಂದು ಬಿನು ತಿಳಿಸಿದರು.
ಅಣ್ಣ ಮದ್ಯಪಾನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅವರು ವೈದ್ಯಕೀಯ ಪರೀಕ್ಷೆ ಮಾಡಿಸಿಲ್ಲ. ಅಣ್ಣ ವಾಸವಿದ್ದ ರೂಮ್ ಮಾಲೀಕರನ್ನೂ ನಾವು ಮಾತನಾಡಿಸಿದ್ದೆವು. ಅವರು ಕೂಡ ಯಾವುದೇ ಕೆಟ್ಟ ಅಭಿಪ್ರಾಯ ಹೇಳಿಲ್ಲ. ಮಹಿಳೆಯೊಬ್ಬರು ಅಣ್ಣನ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ, ಆದರೆ ದೂರಿನ ಪ್ರತಿಯನ್ನು ನಮಗೆ ನೀಡಿಲ್ಲ' ಎಂದು ಬಿನು ಹೇಳಿದರು. ಸಿಐಡಿ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸದ ಕಾರಣಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಧು ಪಿ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿದ್ದ ಸುಜಾತಾ ಅವರನ್ನು ಅಮಾನತು ಮಾಡಲಾಗಿತ್ತು.
Quote - ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಮನೆಯವರು ಕೇರಳ ಮುಖ್ಯಮಂತ್ರಿಗೆ ದೂರು ನೀಡಲು ಸಿದ್ಧತೆ ನಡೆಸಿರುವ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ ಅರುಣ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Kerala native accused dies at Brahmavara Police Station in Udupi, family demands probe.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am