ಬ್ರೇಕಿಂಗ್ ನ್ಯೂಸ್
27-11-24 08:28 pm Mangalore Correspondent ಕರಾವಳಿ
ಮಂಗಳೂರು, ನ.27: ಹಲವಾರು ವರ್ಷಗಳ ಇತಿಹಾಸವುಳ್ಳ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬ್ರಿಟಿಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಹಿಂದಿನ ಕೆನರಾ ಜಿಲ್ಲೆಯ ಆಡಳಿತ ಕೇಂದ್ರಸ್ಥಾನವಾಗಿತ್ತು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷ್ ಅಧಿಕಾರಿಗಳಿಗೆ ಇದು ಕಚೇರಿಯಾಗಿತ್ತು. ನಂತರವೂ ಜಿಲ್ಲಾಧಿಕಾರಿ ಕಚೇರಿ ಇಲ್ಲಿಯೇ ಕಾರ್ಯಾಚರಿಸುತ್ತಿತ್ತು. ಬಳಿಕ ಪಕ್ಕದಲ್ಲಿಯೇ ಹೊಸ ಕಟ್ಟಡವಾದ ಬಳಿಕ ಜಿಲ್ಲಾಧಿಕಾರಿ ಕಚೇರಿ ಅಲ್ಲಿಗೆ ಸ್ಥಳಾಂತರಗೊಂಡಿದ್ದರೂ, ಹಳೇ ಕಟ್ಟಡವನ್ನು ಹಾಗೆಯೇ ಉಳಿಸಿಕೊಂಡು ಬರಲಾಗಿದೆ. ಇಂದಿಗೂ ಗಟ್ಟಿಮುಟ್ಟಾಗಿ ಸುಭದ್ರ ಸ್ಥಿತಿಯಲ್ಲಿರುವ ಈ ಕಟ್ಟಡವು ಜಿಲ್ಲೆಯ ಆಡಳಿತ ಕ್ಷೇತ್ರದ ಭವ್ಯ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತಿದೆ.



ಕಟ್ಟಡದ ಪಾರಂಪರಿಕ ಮತ್ತು ಭವ್ಯ ಇತಿಹಾಸವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಸ್ಥಳದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ನವೆಂಬರ್ 30 ರಂದು ಬೆಳಿಗ್ಗೆ 10 ರಿಂದ ಸರಕಾರಿ ಶಾಲೆಗಳ 3 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಯಾವುದೇ ಪಾರಂಪರಿಕ ಸ್ಮಾರಕಗಳನ್ನು ಈ ಸ್ಪರ್ಧೆಯಲ್ಲಿ ಬಿಡಿಸಬಹುದಾಗಿದೆ. ಅಂದು ಮಧ್ಯಾಹ್ನ 2 ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಹಳೇ ಜಿಲ್ಲಾಧಿಕಾರಿ ಕಟ್ಟಡದ ಒಳ ಮತ್ತು ಹೊರ ಭಾಗದ ಆವರಣದ ಬಗ್ಗೆ ತಮ್ಮ ದೃಷ್ಟಿಕೋನದ ಕಲಾವಿನ್ಯಾಸ ಸ್ಪರ್ಧೆ ನಡೆಯಲಿದೆ. ಈ ಕಟ್ಟಡವನ್ನು ಇನ್ನಷ್ಟು ಆಕರ್ಷಿಸಲು ನವೀನ ವಿನ್ಯಾಸವನ್ನು ಸ್ಪರ್ಧಾಳುಗಳು ತಮ್ಮ ಕಲೆಯಲ್ಲಿ ಪ್ರದರ್ಶಿಸಬಹುದಾಗಿದೆ.
ಬೆಳಗ್ಗೆ 11 ರಿಂದ 12 ಹಾಗೂ ಮಧ್ಯಾಹ್ನ 3 ರಿಂದ 4ರ ವರೆಗೆ ಪಾರಂಪರಿಕ ನಡಿಗೆ, ಸಂಜೆ 4:30 ರಿಂದ ಮುಕ್ತ ಸಂವಾದ ನಂತರ ಬಹುಮಾನ ವಿತರಣೆ, ಸಂಜೆ 6 ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಪಾರಂಪರಿಕ ವಸ್ತು ಪ್ರದರ್ಶನ ನಡೆಯಲಿದೆ. ಮುಂದಿನ ದಿನಗಳಲ್ಲಿ ಈ ಪಾರಂಪರಿಕ ಕಟ್ಟಡದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು, ಪ್ರವಾಸೋದ್ಯಮ ಆಕರ್ಷಿಸುವ ನಿಟ್ಟಿನಲ್ಲಿ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Heritage week on Nov. 30 to Dec 1st at the British era Collectorate office building for children in Mangalore by speaker UT Khader.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am