ಬ್ರೇಕಿಂಗ್ ನ್ಯೂಸ್
28-11-24 01:56 pm Mangalore Correspondent ಕರಾವಳಿ
ಮಂಗಳೂರು, ನ.28: ರಸ್ತೆ ದುರವಸ್ಥೆ ಬಗ್ಗೆ ಪ್ರತಿಭಟನೆ ನಡೆಸಿದ್ದಕ್ಕೆ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ಹಾಕಿರುವುದನ್ನು ವಿರೋಧಿಸಿ ಮಾಜಿ ಸಚಿವ ರಮಾನಾಥ ರೈ ಮುಖ್ಯಮಂತ್ರಿಗೆ ದೂರು ಕೊಟ್ಟಿದ್ದಾರೆ. ಬುಧವಾರ ಬೆಂಗಳೂರಿಗೆ ತೆರಳಿದ್ದ ಅವರು ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.
ಕಮ್ಯುನಿಸ್ಟ್ ಸಂಘಟನೆಯವರು ಕರಾವಳಿಯಲ್ಲಿ ನಮ್ಮ ಪರವಾಗಿರುವವರು. ಜನಪರ ವಿಚಾರದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಾರೆ. ಇಂಥ ಸಂದರ್ಭದಲ್ಲಿ ಅವರ ಮೇಲೆ ಪದೇ ಪದೇ ಎಫ್ಐಆರ್ ಹಾಕುವುದು ಸರಿಯಲ್ಲ. ನಮ್ಮ ಮಾತನ್ನು ಕೇಳದ ಕಮಿಷನರ್ ನಮಗೆ ಬೇಡ, ಅವರನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ.

ಇದೇ ವೇಳೆ, ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರಲ್ಲಿ ಇದೇ ವಿಚಾರದ ಬಗ್ಗೆ ಪ್ರಶ್ನೆ ಹಾಕಲಾಯಿತು. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ಮಾಡುವುದು ತಪ್ಪು. ಪೊಲೀಸರು ಅನುಮತಿ ನಿರಾಕರಿಸಿದ್ದರೆ ಏನಾದರೂ ಕಾರಣ ಇರಬೇಕಲ್ವಾ.. ಅನುಮತಿ ನಿರಾಕರಿಸಿದ್ದು ಯಾಕೆಂದು ಅವರಲ್ಲಿಯೇ ಲಿಖಿತವಾಗಿ ಕೇಳಬೇಕಿತ್ತು. ಅಥವಾ ಐಜಿಪಿ ಅದಕ್ಕಿಂತ ಮೇಲಿನವರಿಂದ ಅನುಮತಿ ಪಡೆಯಲೂ ಬಹುದಿತ್ತು. ಅದು ಬಿಟ್ಟು ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡುವುದು ಸರಿಯಾ.. ಇದಕ್ಕಾಗಿ ಕೇಸು ಹಾಕಿದ್ದಾರೆ. ಕಾನೂನು ಉಲ್ಲಂಘಿಸಿದರೆ ಕೇಸು ಹಾಕೋದು ಫಾರ್ಮಾಲಿಟಿ. ಸಮಾಜದಲ್ಲಿ ಶಾಂತಿ, ಸೌಹಾರ್ದ ಇರಬೇಕಿದ್ದರೆ ಕಾನೂನು, ಪೊಲೀಸ್ ವ್ಯವಸ್ಥೆ ಬೇಕಲ್ವಾ ಎಂದು ಹೇಳಿದ್ದಾರೆ.
![]()
ಕುಳೂರಿನಲ್ಲಿ ರಸ್ತೆ ಬದಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು, ನಾಯಕರು ಪಾಲ್ಗೊಂಡಿದ್ದರು. ಈ ವೇಳೆ, ಮುನೀರ್ ಕಾಟಿಪಳ್ಳ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತ, ಮಂಗಳೂರಿನ ಪೊಲೀಸ್ ಕಮಿಷನರ್ ದೋ ನಂಬರ್ ಬಿಸ್ನೆಸ್ ಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ, ಜನಪರ ವಿಚಾರಗಳಿಗೆ ವಿರೋಧ ಮಾಡುತ್ತಾರೆ ಎಂದಿದ್ದರು. ಅಲ್ಲದೆ, ಪೊಲೀಸರ ವಿರುದ್ಧವೇ ಧಿಕ್ಕಾರದ ಘೋಷಣೆ ಹಾಕಿದ್ದರು. ಇದನ್ನೇ ನೆಪವಾಗಿಸಿ ಕಾವೂರು ಠಾಣೆಯಲ್ಲಿ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
Complaint filed against police commissioner Anupam Agarwal to CM by Ramanath Rai for SUMOTO case against DFYI leader Muneer Katipalla.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm