ಬ್ರೇಕಿಂಗ್ ನ್ಯೂಸ್
28-11-24 02:13 pm Mangalore Correspondent ಕರಾವಳಿ
ಬೆಳ್ತಂಗಡಿ, ನ.28: ಪ್ರೀತಿಸುತ್ತಿದ್ದ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆಂದು ನೊಂದುಕೊಂಡ ಅಪ್ರಾಪ್ತ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.
ಹೃಷ್ವಿ(17) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನ.20 ರಂದು ವಿಷ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈಕೆ ತನ್ನ ಸಂಬಂಧಿ ಚಾರ್ಮಾಡಿ ನಿವಾಸಿ ಪ್ರವೀಣ್ ಎಂಬಾತನನ್ನು ಪ್ರೀತಿಸುತ್ತಿದ್ದು ಮದುವೆ ಆಗುವುದಾಗಿ ನಂಬಿಸಿ ಒಟ್ಟಿಗೆ ತಿರುಗಾಡಿದ್ದರು. ಬಳಿಕ ಮದುವೆ ಆಗುವುದಿಲ್ಲ ಎಂದು ಪ್ರವೀಣ್ ಮೋಸ ಮಾಡಿದ್ದು ಇದರಿಂದ ನೊಂದ ಯುವತಿ ಸಾವಿಗೆ ಶರಣಾಗಿದ್ದಾಳೆ.


ಇವರ ಲವ್ ಆಕೆಯ ಮನೆಯವರಿಗೂ ಗೊತ್ತಿತ್ತು. ಮದುವೆ ಮಾಡಿಕೊಡುವುದಕ್ಕೂ ಒಪ್ಪಿದ್ದರು ಎನ್ನಲಾಗಿದೆ. ಆದರೆ 18 ವರ್ಷ ಪೂರ್ತಿಯಾಗದ ಕಾರಣ ಒಂದು ವರ್ಷದ ಬಳಿಕ ಮದುವೆ ಮಾಡಿ ಕೊಡೋದಾಗಿ ಮನೆಯವರು ಹೇಳಿದ್ದರಂತೆ. ಈ ನಡುವೆ, ಕೆಲವು ವಾರಗಳಿಂದ ಪ್ರವೀಣ್ ಯುವತಿ ಜೊತೆ ಸಂಪರ್ಕ ಕಟ್ ಮಾಡಿದ್ದು ನಿನ್ನನ್ನು ಮದುವೆಯಾಗೋದಿಲ್ಲ. ಲವ್ ಬ್ರೇಕಪ್ ಮಾಡುತ್ತೇನೆ ಅಂದಿದ್ನಂತೆ. ಇದರಿಂದ ನೊಂದ ಯುವತಿ ನಾನು ಸಾಯ್ತೀನಿ ಅಂತ ವಾಟ್ಸಪ್ ನಲ್ಲಿ ಮೆಸೇಜ್ ಮಾಡಿದ್ದಳು. ಆದರೆ ಯುವಕ ಅದನ್ನು ಕ್ಯಾರ್ ಮಾಡಿರಲಿಲ್ಲ.
ಇದರ ಬೆನ್ನಲ್ಲೇ ಮನೆಯಲ್ಲಿ ಇಲಿಗೆ ಹಾಕುವ ವಿಷವನ್ನು ಕುಡಿದಿದ್ದು ಅಸ್ವಸ್ಥಗೊಂಡಿದ್ದಳು. ಇತ್ತ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪುತ್ತಲೇ ಪ್ರವೀಣ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಪರಾರಿಯಾಗಿದ್ದಾನೆ. ಆರೋಪಿ ಪ್ರವೀಣ್ ವಿರುದ್ಧ ಬೆಳ್ತಂಗಡಿ ಠಾಣೆಗೆ ಯುವತಿ ತಾಯಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕ್ಷಣಿಕ ಸಿಟ್ಟಿಗೆ ಬುದ್ಧಿ ಕೊಟ್ಟು ಯುವತಿ ತನ್ನ ಬಾಳು ಹಾಳು ಮಾಡಿಕೊಂಡಿದ್ದಾಳೆ. ಸಾಕಿ ಸಲಹಿದ ಹೆತ್ತವರಿಗೆ ಶಾಕ್ ನೀಡಿದ್ದಾಳೆ.
Belthangady suicide, 17 year old girl dies after love break up, case filed against boy. A teenaged girl who had attempted suicide has succumbed at the hospital on November 26. The deceased is Rishi (17), daughter of Rajesh-Aruna couple hailing from Mittabagilu Nelligudde.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm