ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am