ಬ್ರೇಕಿಂಗ್ ನ್ಯೂಸ್
02-12-24 05:42 pm Mangalore Correspondent ಕರಾವಳಿ
ಮಂಗಳೂರು, ಡಿ.2: ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಕರಾವಳಿಯಲ್ಲೂ ಕಾಣಿಸಿಕೊಂಡಿದೆ. ಮಂಗಳೂರಿನಲ್ಲಿ ಸಂಜೆಯಾಗುತ್ತಲೇ ಭಾರೀ ಮಳೆಯಾಗಿದ್ದು, ನೋಡ ನೋಡುತ್ತಲೇ ರಸ್ತೆಗಳು ಮಳೆಗಾಲದ ರೀತಿ ತುಂಬಿಕೊಂಡಿವೆ. ಕತ್ತಲು ಆವರಿಸುವ ಮುನ್ನವೇ ಬಾನಲ್ಲಿ ಆವರಿಸಿದ ಕಪ್ಪು ಮೋಡಗಳು ಬಿಸಿಲನ್ನು ಓಡಿಸಿದ್ದು, ಜನಮಾನಸದಲ್ಲಿ ಕತ್ತಲನ್ನು ಮೂಡಿಸಿದೆ.
ಚಂಡಮಾರುತದ ಕಾರಣದಿಂದಾಗಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ಹೊತ್ತಿಗೆ ಕೆಲವೊಂದು ತುಂತುರು ಮಳೆ ಬಿದ್ದರೂ, ಜೋರು ಮಳೆಯ ಲಕ್ಷಣ ಕಾಣಿಸಲಿಲ್ಲ. ಸಂಜೆ ನಾಲ್ಕು ಮೂವತ್ತು ಕಳೆದೊಡನೆ ಒಂದೇ ಸಮನೆ ಮಳೆ ಸುರಿದಿದ್ದು, ಧೋ ಎಂದು ಅಬ್ಬರಿಸಿದೆ. ಒಡನೆಯೇ ಸಿಡಿಲು, ಮಿಂಚು ಕೂಡ ಮಾರ್ದನಿಸಿದ್ದು, ಕರಿಗತ್ತಲ ಮೋಡಗಳು ಕತ್ತಲಾಗದಿದ್ದರೂ ಕತ್ತಲನ್ನು ತಂದಿಟ್ಟಿದೆ.





ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಡಿ.2ರಿಂದ 3ರ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜನರು ಜಾಗ್ರತೆ ಇರುವಂತೆ ಸೂಚಿಸಿದೆ. ಅಲ್ಲದೆ, ಡಿ.2ರಿಂದ 6ರ ವರೆಗೆ ಸಮುದ್ರ ಪ್ರಕ್ಷುಬ್ಧವಾಗಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಿದೆ. ಕರ್ನಾಟಕ ಕರಾವಳಿ ಭಾಗದಲ್ಲಿ ಡಿ.3, 4ರ ನಡುವೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಅದಕ್ಕೂ ಮೊದಲೇ ಮಳೆ ಆವರಿಸಿಕೊಂಡಿದೆ.
ಮಂಗಳೂರಿನಲ್ಲಿ ಸಂಜೆ ಹೊತ್ತಿಗೆ ಏಕಾಏಕಿ ಮಳೆಯಾಗಿದ್ದರಿಂದ ಜನರು ಕೊಡೆ, ರೈನ್ ಕೋಟ್ ಇಲ್ಲದೆ ಪರದಾಡಿದ್ದಾರೆ. ಪಕ್ಕದ ಕಾಸರಗೋಡು ಜಿಲ್ಲೆಯ ಕೆಲವು ಭಾಗದಲ್ಲಿ ಮಧ್ಯಾಹ್ನವೇ ಭಾರೀ ಮಳೆಯಾಗಿದ್ದು, ಕುಂಬಳೆಯ ಹೊಸ ಹೆದ್ದಾರಿಯಲ್ಲಿ ಮಳೆ ನೀರು ತುಂಬಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೆ, ಶಾಲಾ ಮೈದಾನಗಳಲ್ಲಿ, ಕೆಲವು ಮನೆಗಳ ಒಳಗೆ ಮತ್ತು ಕೃಷಿ ಜಮೀನುಗಳಿಗೆ ನೀರು ನುಗ್ಗಿರುವುದು ವಿಡಿಯೋ ವೈರಲ್ ಆಗಿದೆ.
Fengal cyclone in Tamil Nadu, heavy rain in Mangalore with thunder, and lightning. The India Meteorological Department (IMD) issued a red alert for four districts in Kerala on Sunday, December 1, 2024, forecasting extremely heavy rainfall for December 2. Malappuram, Kozhikode, Wayanad, and Kannur are expected to receive over 20 cm of rain within 24 hours, prompting concerns about flooding and landslides in these regions.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm