ಬ್ರೇಕಿಂಗ್ ನ್ಯೂಸ್
06-12-24 01:47 pm Mangalore Correspondent ಕರಾವಳಿ
ಮಂಗಳೂರು, ಡಿ.6: ಪ್ರೀತಿ, ಪ್ರೇಮಕ್ಕೆ ಭಾಷೆ, ದೇಶದ ಹಂಗಿಲ್ಲ ಎಂಬ ಮಾತಿದೆ. ಕೆಲಸದ ನಿಮಿತ್ತ ಥೈಲ್ಯಾಂಡಿನಲ್ಲಿ ನೆಲೆಸಿದ್ದ ಮಂಗಳೂರಿನ ಯುವಕನಿಗೆ ಅಲ್ಲಿನ ಯುವತಿ ಜೊತೆಗೆ ಪ್ರೇಮಾಂಕುರವಾಗಿದ್ದು ಡಿ.5ರಂದು ತುಳುನಾಡಿನ ಸಂಪ್ರದಾಯದಲ್ಲಿಯೇ ಮಂಗಳಾದೇವಿ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಮಂಗಳೂರಿನ ಯುವಕ ಪೃಥ್ವಿರಾಜ್ ಎಸ್.ಅಮೀನ್ ಹಾಗೂ ಥೈಲ್ಯಾಂಡ್ ಯುವತಿ ಮೊಂತಕಾನ್ ಸಸೂಕ್ ಮಂಗಳೂರಿನ ಮಂಗಳಾದೇವಿ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆಯೇ ಥೈಲ್ಯಾಂಡ್ ಸಂಪ್ರದಾಯ ಪ್ರಕಾರ ಇವರು ಜುಲೈನಲ್ಲಿ ವಿವಾಹವಾಗಿದ್ದರು. ಮಂಗಳೂರಿನ ವಕೀಲೆ ಸುಜಯಾ ಸತೀಶ್ ಹಾಗೂ ಸತೀಶ್ ಕುಮಾರ್ ಅವರ ಪುತ್ರ ಪೃಥ್ವಿರಾಜ್ ಬೆಂಗಳೂರಿನಲ್ಲಿ ತಮ್ಮದೇ ಸಾಫ್ಟ್ವೇರ್ ಕಂಪೆನಿ ಮುನ್ನಡೆಸುತ್ತಿದ್ದಾರೆ. ಟಾಟಾ, ಪೋರ್ಸ್ ಮುಂತಾದ ಕಂಪೆನಿಗಳಿಗೆ ಸಾಫ್ಟ್ವೇರ್ ಸರ್ವೀಸ್ ಸೇವೆ ಒದಗಿಸುತ್ತಿದ್ದಾರೆ.












ಥೈಲ್ಯಾಂಡ್ ಹೋಗಿದ್ದ ವೇಳೆ ಪೃಥ್ವಿರಾಜ್ಗೆ ಪ್ರೇಮಿಗಳ ದಿನವೇ ಮೊಂತಕನ್ ಸಸೂಕ್ ಪರಿಚಯವಾಗಿತ್ತು. ಆಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಪರಸ್ಪರ ಪ್ರೀತಿ ಗಟ್ಟಿಗೊಳ್ಳುತ್ತಿದ್ದಂತೆ ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿರುವುದಾಗಿ ಪೃಥ್ವಿರಾಜ್ ತಿಳಿಸಿದ್ದಾರೆ. ಥೈಲ್ಯಾಂಡ್ ಯುವತಿಯನ್ನು ಮದುವೆಯಾಗುವ ವಿಷಯ ತಿಳಿಸಿದಾಗ ಪಾಲಕರು ಆಘಾತಕ್ಕೆ ಒಳಗಾಗಿದ್ದರು. ಬಳಿಕ ಸಮ್ಮತಿ ನೀಡಿದರು ಎಂದು ಪೃಥ್ವಿರಾಜ್ ಹೇಳಿದ್ದಾರೆ.
ಥೈಲ್ಯಾಂಡ್ ಭಾಷೆ ಸ್ವಲ್ಪ ಸ್ವಲ್ಪ ಕಲಿಯತೊಡಗಿದ್ದೇನೆ. ಕೆಲವು ಪದಗಳು ಬರುತ್ತವೆ. ಮೊಂತಕಾನ್ ಕೂಡ ತುಳು ಭಾಷೆಯನ್ನು ಕಲಿಯುತ್ತಿದ್ದು, ಮುಂದೆ ತುಳುವಿನಲ್ಲೇ ಮಾತನಾಡಲಿದ್ದಾರೆ ಎಂದು ಪೃಥ್ವಿರಾಜ್ ಹೇಳಿಕೊಂಡಿದ್ದಾರೆ.
On December 5th, a beautiful wedding took place at the Mangaladevi Temple in the city, where Mangalorean boy Prutivraj married Thai girl Motkan Sasuk. The ceremony brought together two cultures and celebrated love and unity. The temple, known for its serene atmosphere and historical significance, served as the perfect backdrop for this special occasion. Friends and family gathered to witness the couple exchange vows, marking the beginning of their journey together.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am