ಬ್ರೇಕಿಂಗ್ ನ್ಯೂಸ್
08-12-24 11:31 am Mangalore Correspondent ಕರಾವಳಿ
ಉಳ್ಳಾಲ, ಡಿ.8: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶನಿವಾರ ಮಧ್ಯರಾತ್ರಿ ನಾಟೆಕಲ್ ಮಂಜನಾಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಮಂಜನಾಡಿಯ ಖಂಡಿಕ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಸ್ಫೋಟ ನಡೆದಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಮನೆಯೊಳಗಡೆ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ತೀವ್ರತೆಗೆ ತಾರಸಿ ಮನೆಯ ಮೇಲ್ಭಾಗದ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ,ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿಧ್ರಗೊಂಡು ಸುಟ್ಟು ಕರಕಲಾಗಿದೆ.






ಈ ಸಂದರ್ಭ ತಾಯಿ ಜೊತೆ ಮಲಗಿದ್ದ ಹಿರಿ ಮಗಳು ಬಾಗಿಲು ತೆರೆದಿದ್ದಾಳೆ. ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಿ, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮನೆಯೊಳಗಿದ್ದ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಫೋಟಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಸಿಲಿಂಡರ್ ಮನೆಯೊಳಗಿಂದ ಹೊರಗಡೆಗೆ ಎಸೆಯಲ್ಪಟ್ಟಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A mother and her three children sustained serious injuries when a gas cylinder exploded at their home in Kandika, under the Manjanady village limits. All four are currently admitted to the ICU of a private hospital in Deralakatte.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am