ಬ್ರೇಕಿಂಗ್ ನ್ಯೂಸ್
08-12-24 09:18 pm Mangalore Correspondent ಕರಾವಳಿ
ಮಂಗಳೂರು, ಡಿ.8: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಒಮ್ಮಿಂದೊಮ್ಮೆಲೇ ಭಾರೀ ಮಳೆಯಾಗಿದ್ದು ಇಡೀ ಮಳೆಗಾಲದ ಮಳೆಯನ್ನು ಒಂದೇ ದಿನ ಅನುಭವಿಸಿದ್ದೂ ಆಗಿತ್ತು. ಇದೀಗ ಮತ್ತೆ ಚಂಡಮಾರುತ ಕಾಣಿಸುವ ಬಗ್ಗೆ ಸೂಚನೆ ನೀಡಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ ಆರಂಭದಲ್ಲಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಗಿತ್ತು. ಅಪರೂಪ ಎನ್ನುವಂತೆ ಮಾರುತ ನಿಧಾನ ಗತಿಯಲ್ಲಿ ಸಾಗಿದ್ದರಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಹಾನಿಯಿಂದ ಜನ ಸುಧಾರಿಸುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗಲಿದೆ ಎಂದು ಹೇಳಿರುವುದು ಆತಂಕ ಮೂಡಿಸಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2ನೇ ವಾಯುಭಾರ ಕುಸಿತವು ಡಿಸೆಂಬರ್ 16ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 - 18ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
The people of South Karnataka and the coastal areas were devastated by the storm of Cyclone Fangal, which had formed in the Bay of Bengal. It rained heavily all at once, and experienced the rain of the entire monsoon season in a single day.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am