ಬ್ರೇಕಿಂಗ್ ನ್ಯೂಸ್
09-12-24 03:11 pm Mangalore Correspondent ಕರಾವಳಿ
ಉಳ್ಳಾಲ, ಡಿ.9: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು, ಉಚ್ಚಿಲದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ಹೈಡ್ರೋ ಕ್ಲೋರಿಕ್ ಆಸಿಡ್ ಸೋರಿಕೆಯಾಗಿದ್ದು, ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್ ಪಿಎಲ್ ತಜ್ಞರ ತಂಡ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರೋ ಕ್ಲೋರಿಕ್ ಆಸಿಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರಿನಲ್ಲಿ ತಾಂತ್ರಿಕ ದೋಷದಿಂದ ಆಸಿಡ್ ಸೋರಿಕೆಯುಂಟಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಸಿಡ್ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳದಲ್ಲಿ ಅಗ್ನಿ ಶಾಮಕದಳ, ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರನ್ನು ಸ್ಥಳೀಯ ನಿರ್ಮಾಣ ಹಂತದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದು ,ಅನಿಲ ಸೋರಿಕೆ ಭಾಗಕ್ಕೆ ಎಮ್ಸಿಲ್ ಅಂಟಿಸಿದರೂ ಸೋರಿಕೆ ಮುಂದುವರಿದಿದ್ದು ಎಂಆರ್ ಪಿಎಲ್ ತಜ್ಞರ ತಂಡವನ್ನ ಸ್ಥಳಕ್ಕೆ ಕರೆಸಲಾಗಿದೆ.




ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಸಂಬಂಧ ಪಟ್ಟ ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ. ಏಸಿಡ್ ಸೋರಿಕೆಯಾದರೂ, ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಪೊಲೀಸರು ಗಂಭೀರ ವಹಿಸಿದಂತಿಲ್ಲ. ಸದ್ಯ ಟ್ಯಾಂಕರನ್ನು ಎಂಆರ್ ಪಿಎಲ್ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿರುವುದಾಗಿ ಉಳ್ಳಾಲ ತಹಸೀಲ್ದಾರ್ ತಿಳಿಸಿದ್ದಾರೆ.
Mangalore Gas tanker faces leakage of Hydrochloric acid at kotekar, MRPL team arrives, major accident averted
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am