ಬ್ರೇಕಿಂಗ್ ನ್ಯೂಸ್
09-12-24 11:05 pm Udupi Correspondent ಕರಾವಳಿ
ಕುಂದಾಪುರ, ಡಿ.9: ಗೋವಾಕ್ಕೆ ಬೈಕ್ ರೈಡಿಂಗ್ ಹೋಗಿ ಹಿಂತಿರುಗುತ್ತಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಟ್ಯಾಂಕರ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಗಂಗೊಳ್ಳಿ ಠಾಣೆ ವ್ಯಾಪ್ತಿಯ ಮುಳ್ಳಿಕಟ್ಟೆ ಎಂಬಲ್ಲಿನ ಆರಾಟೆ ಸೇತುವೆ ಬಳಿ ನಡೆದಿದೆ.
ಮಂಗಳೂರಿನ ಕೆಬಿ ಯುವರಾಜ್ ಬಳ್ಳಾಲ್ ಅವರ ಪುತ್ರ ರಂಜಿತ್ ಬಳ್ಳಾಲ್ (59) ಮೃತ ವ್ಯಕ್ತಿ. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ ರಂಜಿತ್ ಬಳ್ಳಾಲ್ ಬೈಕ್ ಮೇಲಿನ ಕ್ರೇಜಿನಿಂದಾಗಿ ಮಂಗಳೂರಿನಿಂದ ಹತ್ತು ದಿನಗಳ ಹಿಂದೆ ಗೋವಾಕ್ಕೆ ಬೈಕಿನಲ್ಲಿ ತೆರಳಿದ್ದರು. ಸೋಮವಾರ ಸಂಜೆ ತನ್ನ ಬಿಎಂಡಬ್ಲ್ಯು ಬೈಕಿನಲ್ಲಿ ಮಂಗಳೂರಿನತ್ತ ಮರಳುತ್ತಿದ್ದಾಗ, ಗಂಗೊಳ್ಳಿಯ ಆರಾಟೆ ಸೇತುವೆ ಬಳಿ ಅಪಘಾತ ನಡೆದಿದೆ. ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಒಂದೇ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳನ್ನು ಬಿಡಲಾಗುತ್ತಿದೆ. ಇದರ ಬಗ್ಗೆ ಅರಿವಿರದ ರಂಜಿತ್ ಅವರು ನೇರವಾಗಿ ಓವರ್ ಟೇಕ್ ಮಾಡಿಕೊಂಡು ಬರುತ್ತಿದ್ದಾಗ ಮುಂದಿನಿಂದ ಬಂದ ಗ್ಯಾಸ್ ತುಂಬಿದ ಟ್ಯಾಂಕರ್ ಡಿಕ್ಕಿಯಾಗಿದೆ.



ಆಧುನಿಕ ಮಾದರಿಯ ಹೆಲ್ಮೆಟ್ ಹಾಕಿದ್ದರೂ, ಡಿಕ್ಕಿಯ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಂಜಿತ್ ಬಳ್ಳಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರಾಟೆ ಸೇತುವೆಯಲ್ಲಿ ಎರಡು ವಾರದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸರಣಿ ಅಪಘಾತಗಳು ನಡೆಯುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿ ನಿರ್ವಹಿಸುತ್ತಿರುವ ಐಆರ್ ಬಿ ಇನ್ ಫ್ರಾ ಸ್ಟ್ರಕ್ಚರ್ಸ್ ನವರ ನಿರ್ಲಕ್ಷ್ಯದಿಂದಾಗಿ ಅಪಘಾತ ಆಗಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರ ಅಪಘಾತ, ಸಾವು- ನೋವು ಆಗುತ್ತಿದ್ದರೂ ಅಧಿಕಾರಿಗಳು ಅಸಡ್ಡೆ ತೋರಿದ್ದಾರೆ.
A bike rider lost his life on the spot after colliding with a gas transport vehicle near Arate Bridge on National Highway 66 close to Mullikatte. The deceased has been identified as Ranjith Ballal, son of K B Yuvaraj Ballal, originally from Mangaluru and currently residing in Bengaluru.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm